ಬೆಂಗಳೂರು : ಹಲವಾರು ವಿರೋಧ ಪ್ರತಿರೋಧದ ನಡುವೆಯೂ ಬಳ್ಳಾರಿ ಜಿಲ್ಲೆ ವಿಭಜನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗ್ತಿದೆ. ಸರ್ಕಾರದ ಈ ನಿರ್ಧಾರ ಕೆಲವರ ಸಂಭ್ರಕ್ಕೆ ಕಾರಣವಾಗಿದ್ರೆ, ಅನೇಕರ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ.
ಇನ್ನೂ ನವೆಂಬರ್ 1 ರಂದು ಅಂದ್ರೆ ಕನ್ನಡರಾಜ್ಯೋತ್ಸದಂದೇ ವಿಜಯನಗರವನ್ನ ಹೊಸ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತೆ ಎನ್ನುವ ಗುಮಾನಿ ಎದ್ದಿದೆ. ವಿಜಯನಗರ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂಬ ಈ ಭಾಗದ ಜನರ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಕೊನೆಗೂ ಅಸ್ತು ಎಂದಿದ್ದು, 31 ನೇ ಜಿಲ್ಲೆಯಾಗಿ ವಿಜಯನಗರ ನೂತನ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಲಾಗುತ್ತಿದೆ.
ವಿಜಯನಗರ ಜಿಲ್ಲೆ ಘೋಷಣೆ ಸಂಬಂಧ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಬಿ.ಎಸ್.

