ಕೊರೊನಾ ಮಧ್ಯೆ ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆ Ganesha festival saaksha tv
ಬೆಂಗಳೂರು : ನಾಡಿನಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ.
ಕೊರೊನಾ ವೈರಸ್ ನ ಕಾಟದ ಮಧ್ಯೆಯೂ ಒಂದಿಷ್ಟು ಕಟ್ಟುನಿಟ್ಟಿನ ಕ್ರಮಗಳೊಂದಿಗೆ ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಕೋವಿಡ್ ಕುರಿತ ಎಲ್ಲಾ ಲೇಟೆಸ್ಟ್ ಅಪ್ಡೇಟ್ಸ್ ಓದಿ
ಕಳೆದ ವರ್ಷ ಕೊರೊನಾದಿಂದಾಗಿ ಸಾರ್ವಜನಿಕವಾಗಿ ಗಣೇಶ ಚತುರ್ಥಿ ಆಚರಣೆಗೆ ಅವಕಾಶ ನೀಡಿರಲಿಲ್ಲ.
ಆದ್ರೆ ಈ ಬಾರಿ ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನಲೆಯಲ್ಲಿ ಪಾಸಿಟಿವಿಟಿ ದರ ಶೇಕಡಾ 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಗಣೇಶೋತ್ಸವ ಆಚರಿಸಲು ಸರ್ಕಾರ ಅನುಮತಿ ನೀಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ಗಣಪನಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರು ಬೆನಕನ ಕೃಪೆಗೆ ಪಾತ್ರರಾಗುತ್ತಿದ್ದಾರೆ.
ಕೆಲವು ಭಾಗಗಳಲ್ಲಿ ಈಗಾಗಲೇ ಗಣಪನ ಪ್ರತಿಷ್ಠಾಪನೆ ನಡೆದಿದೆ. ಇನ್ನು ಹಲವು ಕಡೆ ಗಣೇಶ ಪ್ರತಿಷ್ಟಾಪನೆಗೆ ತಯಾರಿ ನಡೆಯುತ್ತಿದೆ.
Namratha Rao
ಕಂಟೆಂಟ್ ಎಡಿಟರ್ -saakshatv.com

