Dailyhunt Logo
  • Light mode
    Follow system
    Dark mode
    • Play Story
    • App Story
ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

Saaksha TV 1 week ago

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ.

ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ ತೆರಳಲು ಅನುಮತಿ ಕೋರಿ ಬಿ. ನಾಗೇಂದ್ರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಈ ಅರ್ಜಿಗೆ ಜಾರಿ ನಿರ್ದೇಶನಾಲಯ (ED) ಆಕ್ಷೇಪಣೆ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ದೆಹಲಿ ಪ್ರವಾಸಕ್ಕೆ ಅರ್ಜಿದಾರರು ಸಮರ್ಪಕ ಹಾಗೂ ಸಮಂಜಸ ಕಾರಣವನ್ನು ನೀಡಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಈ ಹಿನ್ನೆಲೆಯಲ್ಲಿ, ದೆಹಲಿ ಪ್ರವಾಸಕ್ಕೆ ಅನುಮತಿ ನೀಡಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಲಾಗಿದೆ.

ವಾಲ್ಮೀಕಿ ನಿಗಮ ಹಗರಣದ ತನಿಖೆ ಮುಂದುವರಿದಿರುವ ನಡುವೆ ನ್ಯಾಯಾಲಯದ ಈ ಆದೇಶವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Saaksha TV