Dailyhunt Logo
  • Light mode
    Follow system
    Dark mode
    • Play Story
    • App Story
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Suddidina