by suddionenews September 10, 2021, 2:25 PM 1.1k Views
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದಷ್ಟು ಸಮಸ್ಯೆಗಳು ಬಗೆ ಹರಿಯೋದೆ ಇಲ್ವೇನೊ ಅನ್ನೋ ರೀತಿ ಇದಾವೆ. ಇದೀಗ ಮಳೆ ಬಂದ ಕಾರಣ ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳೆಲ್ಲಾ ನೀರು ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.
ಹೌದು, ಈ ಸಂಬಂಧ ಇಂದು ನಗರದಲ್ಲಿ ಮಾತನಾಡಿದ ಸಚಿವರು ಸೆಪ್ಟೆಂಬರ್ 30ರ ಒಳಗೆ ರಸ್ತೆ ಗುಂಡಿಗಳನ್ನ ಮುಚ್ಚಲಾಗುವುದು ಎಂದಿದ್ದಾರೆ. ಈಗಾಗಲೇ ಮಳೆಯಿಂದಾಗಿ ಗುಂಡಿ ಬಿದ್ದಿರುವ ರಸ್ತೆಗಳನ್ನ ಸರಿಪಡಿಸಲು ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈಗಾಗಲೇ ನಗರದ ರಸ್ತೆ ಗುಂಡಿಗಳ ಸರ್ವೇ ನಡೆದಿದೆ. ಪದ್ಮನಾಭ ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ. ಈ ತಿಂಗಳ ಕೊನೆಯಲ್ಲಿ ಸಿಲಿಕಾನ್ ಸಿಟಿಯ ಎಲ್ಲಾ ರಸ್ತೆ ಗುಂಡಿಗಳನ್ನ ಮುಚ್ಚಲಾಗುತ್ತೆ. ಈ ಸಂದರ್ಭದಲ್ಲಿ ಏನಾದ್ರೂ ಕಳಪೆ ಕಾಮಗಾರಿ ನಡೆದ್ರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

