Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣಕ್ಕೆ ಬ್ರೇಕ್: ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ

ರಾಜ್ಯದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣಕ್ಕೆ ಬ್ರೇಕ್: ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ

ಬೆಂಗಳೂರು.ಜುಲೈ.04: ಕರ್ನಾಟಕದ ಇಂಧನ ವಲಯದಲ್ಲಿ ಖಾಸಗೀಕರಣದ ಭೀತಿಯಲ್ಲಿದ್ದ ನೌಕರರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ ಯಾವುದೇ ವಿದ್ಯುತ್ ಸರಬರಾಜು ಕಂಪನಿಗಳನ್ನು ಯಾವುದೇ ಕಾರಣಕ್ಕೂ ಖಾಸಗಿ ಸಂಸ್ಥೆಗಳ ಕೈಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (ಕೆಪಿಟಿಸಿಎಲ್) ಅಧಿಕಾರಿಗಳು ಮತ್ತು ನೌಕರರ ಒಕ್ಕೂಟ ಆಯೋಜಿಸಿದ್ದ ವಿಶೇಷ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಈ ದೃಢವಾದ ಭರವಸೆ ನೀಡಿದರು. ಸರ್ಕಾರದ ಈ ಕಟ್ಟುನಿಟ್ಟಾದ ನಿಲುವು ಪ್ರಕಟವಾಗುತ್ತಿದ್ದಂತೆ, ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಮುಂದಾಗಿದ್ದ ಟಾಟಾ ಪವರ್ ಕಂಪನಿಯು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಸಲ್ಲಿಸಿದ್ದ ತನ್ನ ಅರ್ಜಿಯನ್ನು ಅಧಿಕೃತವಾಗಿ ಹಿಂಪಡೆದಿದೆ.

ಸರ್ಕಾರದ ಈ ಐತಿಹಾಸಿಕ ನಿರ್ಧಾರದಿಂದ ಹರ್ಷಗೊಂಡ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಹಾಗೂ ನೌಕರರ ಒಕ್ಕೂಟದ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು. ಈ ಯಶಸ್ವಿ ಕಾರ್ಯಕ್ರಮದಲ್ಲಿ ಒಕ್ಕೂಟದ ಪ್ರಮುಖ ನಾಯಕರಾದ ಬಸವಣ್ಣ, ಚಂದ್ರಶೇಖರ ದೇಸಾಯಿ, ರಾಜೋಜಿ ರಾವ್ ಸೇರಿದಂತೆ ಇಂಧನ ವಲಯದ ಹಿರಿಯ ಅಧಿಕಾರಿಗಳು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Suddione