Dailyhunt Logo
  • Light mode
    Follow system
    Dark mode
    • Play Story
    • App Story
ಅಂಕೋಲಾದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಢಿಕ್ಕಿ: ಸವಾರನಿಗೆ ಗಂಭೀರ ಗಾಯ; ಕಾರು ನಿಲ್ಲಿಸಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ ಸಚಿವ

ಅಂಕೋಲಾದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಢಿಕ್ಕಿ: ಸವಾರನಿಗೆ ಗಂಭೀರ ಗಾಯ; ಕಾರು ನಿಲ್ಲಿಸಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ ಸಚಿವ

ಅಂಕೋಲಾ ಜುಲೈ 04: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಎಸ್ಕಾರ್ಟ್ (ಬೆಂಗಾವಲು) ವಾಹನಕ್ಕೆ ಸ್ಕೂಟಿಯೊಂದು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯ ವರದರಾಜ್ ಹೋಟೆಲ್ ಸಮೀಪ ನಡೆದಿದೆ. ಅಪಘಾತ ಸಂಭವಿಸಿದ ತಕ್ಷಣವೇ ಸಚಿವರು ವಿವಿಐಪಿ ಪ್ರೋಟೋಕಾಲ್ ಬದಿಗಿಟ್ಟು, ಸ್ವತಃ ಗಾಯಾಳುವನ್ನು ತಮ್ಮದೇ ವಾಹನದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಾಲ್ಲೂಕಿನ ಅಲಗೇರಿ ಮೂಲದ ನಿವಾಸಿ ಸಂದೀಪ್ ನಾಯಕ್ ಗಂಭೀರವಾಗಿ ಗಾಯಗೊಂಡ ಸ್ಕೂಟಿ ಸವಾರ. ಸಚಿವ ಯು.ಟಿ. ಖಾದರ್ ಅವರು ಕಾರವಾರದಿಂದ ಉಡುಪಿ ಕಡೆಗೆ ಅಧಿಕೃತ ಪ್ರವಾಸ ನಿಮಿತ್ತ ಬೆಂಗಾವಲು ವಾಹನಗಳ ಸರಣಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಅಂಕೋಲಾ ಪಟ್ಟಣದ ವರದರಾಜ್ ಹೋಟೆಲ್ ಆಸುಪಾಸಿನಲ್ಲಿ ಸಚಿವರ ಬೆಂಗಾವಲು ವಾಹನಕ್ಕೆ ಸಂದೀಪ್ ನಾಯಕ್ ಚಲಾಯಿಸುತ್ತಿದ್ದ ಸ್ಕೂಟಿ ಅನಿರೀಕ್ಷಿತವಾಗಿ ಢಿಕ್ಕಿಯಾಗಿದೆ.

ಢಿಕ್ಕಿಯ ತೀವ್ರತೆಗೆ ಸವಾರ ಸಂದೀಪ್ ಹೆದ್ದಾರಿಗೆ ಬಿದ್ದು ತಲೆ ಹಾಗೂ ಕೈಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು.ತಮ್ಮ ಬೆಂಗಾವಲು ಪಡೆಗೆ ಅಪಘಾತವಾಗಿರುವುದನ್ನು ಗಮನಿಸಿದ ಸಚಿವ ಯು.ಟಿ. ಖಾದರ್ ಅವರು ತಕ್ಷಣವೇ ತಮ್ಮ ಕಾರನ್ನು ನಿಲ್ಲಿಸಲು ಸೂಚಿಸಿದರು. ಭದ್ರತಾ ಸಿಬ್ಬಂದಿಯೊಂದಿಗೆ ತಾವೇ ಖುದ್ದಾಗಿ ಹೆದ್ದಾರಿಗೆ ಧಾವಿಸಿದ ಸಚಿವರು, ಸಂದೀಪ್ ನಾಯಕ್‌ನನ್ನು ಪ್ರೀತಿಯಿಂದ ಎತ್ತಿಕೊಂಡರು. ಸಾರ್ವಜನಿಕರ ಸಹಾಯದಿಂದ ಗಾಯಾಳುವನ್ನು ತಕ್ಷಣವೇ ಅಂಕೋಲಾ ಪಟ್ಟಣದ ಆರ್ಯ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿ ವ್ಯವಸ್ಥೆ ಕಲ್ಪಿಸಿದರು. ಸದ್ಯ ಆರ್ಯ ಮೆಡಿಕಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಗಾಯಾಳು ಸಂದೀಪ್ ನಾಯಕ್‌ಗೆ ಚಿಕಿತ್ಸೆ ಮುಂದುವರಿದಿದೆ. ಈ ಅಪಘಾತದ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಚಾರಿ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
Dailyhunt
Disclaimer: This content has not been generated, created or edited by Dailyhunt. Publisher: themangaloremirror