ಬ್ರಹ್ಮಾವರ ಎಪ್ರಿಲ್ 04: ಹೇರಾಡಿ ಗ್ರಾಮದ ಮನೆಯೊಂದರ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸರು ಬಾರಕೂರು ನಿವಾಸಿ ಪ್ರವೀಣ್ ಕುಮಾರ್ ಕೆ (ಪ್ರವೀಣ್) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ 14 ಲಕ್ಷ ರೂ.
ಮೌಲ್ಯದ ಸ್ವತ್ತನ್ನು ದೋಚಲಾಗಿತ್ತು.ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಪ್ರವೀಣ್ನನ್ನು ಸೆರೆಹಿಡಿದಿದ್ದಾರೆ. ಈತನಿಂದ ಕಳವು ಮಾಡಲಾಗಿದ್ದ ಚಿನ್ನದ ಬೆಂಡೋಲೆ, ಉಂಗುರ, ಬೆಳ್ಳಿಯ ಹರಿವಾಣ ಹಾಗೂ 7,500 ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.

