Dailyhunt
ಕರೀಂನಗರ: ಐದು ವರ್ಷದ ಅವಳಿ ಪುತ್ರಿಯರನ್ನೇ ಬಾವಿಗೆ ತಳ್ಳಿ ಕೊಂದ ಪಾಪಿ ತಂದೆ

ಕರೀಂನಗರ: ಐದು ವರ್ಷದ ಅವಳಿ ಪುತ್ರಿಯರನ್ನೇ ಬಾವಿಗೆ ತಳ್ಳಿ ಕೊಂದ ಪಾಪಿ ತಂದೆ

ರೀಂನಗರ ಎಪ್ರಿಲ್ 04: ಹೆಣ್ಣು ಮಕ್ಕಳೆಂಬ ಕಾರಣಕ್ಕೆ ತಂದೆಯೊಬ್ಬ ತನ್ನ ಐದು ವರ್ಷದ ಅವಳಿ ಹೆಣ್ಣುಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕರೀಂನಗರ ಗ್ರಾಮೀಣ ಮಂಡಲದ ಜುಬಿಲಿ ನಗರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಆರೋಪಿ ತಂದೆ ಕಚ್ಚು ಶ್ರೀಶೈಲಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಗೀತಾಂಶಿ ಮತ್ತು ಗೀತಾ ನವಿಕಾ (5) ಕೊಲೆಯಾದ ದುರ್ದೈವಿಗಳು. ಆರೋಪಿ ಶ್ರೀಶೈಲಂ ತನ್ನ ಪತ್ನಿ ಮೌನಿಕಾ ಮನೆಯಲ್ಲಿ ಇಲ್ಲದ ಸಮಯ ಸಾಧಿಸಿ, ಇಬ್ಬರು ಮಕ್ಕಳನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಮಕ್ಕಳಿಗೆ ಬಲವಂತವಾಗಿ ಕೀಟನಾಶಕ ಕುಡಿಸಿ, ನಂತರ ಅವರನ್ನು ಕೃಷಿ ಬಾವಿಗೆ ಎಸೆದಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಮನೆಗೆ ಹಿಂತಿರುಗಿದ ಪತ್ನಿ ಮೌನಿಕಾ ಮಕ್ಕಳು ಕಾಣದಿದ್ದಾಗ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾವಿಯಲ್ಲಿ ಮಕ್ಕಳ ಶವ ಪತ್ತೆಯಾಗಿದೆ. ಪತ್ನಿ ಮತ್ತು ಗ್ರಾಮಸ್ಥರು ಶ್ರೀಶೈಲಂನನ್ನು ತರಾಟೆಗೆ ತೆಗೆದುಕೊಂಡಾಗ ಆತ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಆರೋಪಿಗೆ ತೀವ್ರವಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ತಂದೆಗೆ ಹೆಣ್ಣು ಮಕ್ಕಳೆಂದರೆ ಮೊದಲಿನಿಂದಲೂ ಇಷ್ಟವಿರಲಿಲ್ಲ, ಇದೇ ವಿಷಯವಾಗಿ ಪತ್ನಿಯೊಂದಿಗೆ ನಿರಂತರ ಜಗಳವಾಡುತ್ತಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Dailyhunt
Disclaimer: This content has not been generated, created or edited by Dailyhunt. Publisher: themangaloremirror