Dailyhunt Logo
  • Light mode
    Follow system
    Dark mode
    • Play Story
    • App Story
ಪುತ್ತೂರು: ಭೂ ನ್ಯಾಯ ಮಂಡಳಿ ಸಭೆಯಲ್ಲೇ ಕುಸಿದು ಬಿದ್ದು ಕಂಬಳದ ಖ್ಯಾತ ನಿರೂಪಕ ನಿರಂಜನ ರೈ ಮಠಂತಬೆಟ್ಟು ನಿಧನ

ಪುತ್ತೂರು: ಭೂ ನ್ಯಾಯ ಮಂಡಳಿ ಸಭೆಯಲ್ಲೇ ಕುಸಿದು ಬಿದ್ದು ಕಂಬಳದ ಖ್ಯಾತ ನಿರೂಪಕ ನಿರಂಜನ ರೈ ಮಠಂತಬೆಟ್ಟು ನಿಧನ

ಪುತ್ತೂರು ಜುಲೈ 08: ಪುತ್ತೂರು ಭೂ ನ್ಯಾಯ ಮಂಡಳಿ ಸದಸ್ಯ ನಿರಂಜನ ರೈ ಮಠಂದಬೆಟ್ಟು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಪುತ್ತೂರು ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆಯುತ್ತಿದ್ದ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ತೀವ್ರತರದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕಂಬಳದ ಖ್ಯಾತ ವೀಕ್ಷಕ ವಿವರಣೆಗಾರರೂ ಆಗಿರುವ ನಿರಂಜನ್ ರೈ ಗುರುತಿಸಿಕೊಂಡಿದ್ದರು. ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆ ಕುಸಿದು ಬಿದ್ದ ಅವರನ್ನು ತಕ್ಷಣವೇ ಸಹಾಯಕ ಆಯುಕ್ತ, ತಹಶೀಲ್ದಾರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಅವರು ಸಾವನಪ್ಪಿದ್ದರು ಎಂದು ವೈದ್ಯರು ತಿಳಿಸಿದ್ದಾರ.ಉಪ್ಪಿನಂಗಡಿ ಸಮೀಪದ ಮಠಂತಬೆಟ್ಟು ನಿವಾಸಿಯಾಗಿದ್ದ ನಿರಂಜನ ರೈಯವರು ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ, ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಪುತ್ತೂರು ಭೂನ್ಯಾಯ ಮಂಡಳಿ ಸದಸ್ಯರಾಗಿದ್ದ ಅವರು ಬನ್ನೂರು ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ, ಬಂಟರ ಸಂಘದಲ್ಲಿ ಸಕ್ರಿಯವಾಗಿದ್ದರು. ಕಂಬಳ ಸ್ಪರ್ಧೆಗಳಲ್ಲಿ ವೀಕ್ಷಕ ವಿವರಣೆಗಾರರಾಗಿ ಪರಿಚಿತರಾಗಿದ್ದರು. ಕಂಬಳದ ಕುರಿತು ಹೊಂದಿದ್ದ ಅಪಾರ ಜ್ಞಾನ, ಸ್ಪಷ್ಟ ನಿರೂಪಣೆ ಹಾಗೂ ವಿಶಿಷ್ಟ ಶೈಲಿಯಿಂದ ಕಂಬಳ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಿರಂಜನ್ ರೈ ಮಠಂತಬೆಟ್ಟು ನಿಧನ ಶಾಸಕ ಅಶೋಕ್ ರೈ ಸಂತಾಪತನ್ನ ಒಡನಾಡಿಯೂ,ಆತ್ಮೀಯರೂ ಆಗಿದ್ದ ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರಾದ ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಶಾಸಕ ಆಶೋಕ್ ರೈ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಟಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ,ಜಿಲ್ಲಾ ಕಂಬಳ ಸಮಿತಿ ಉಪಾಧ್ಯಕ್ಷರಾಗಿ, ಕಂಬಳದ ವೀಕ್ಷಕ ವಿವರಣೆ ಹಾಗೂ ತೀರ್ಪುಗಾರರಾಗಿ ಅಪಾರ ಸೇವೆ ಸಲ್ಲಿಸಿದ್ದ ಮೃತರು ಮೃದು ಸ್ವಭಾವನ ಸಜ್ಜನ ವ್ಯಕ್ತಿಯೂ ಆಗಿದ್ದರು. ಮೃತರ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಶಾಸಕರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾರ್ಯಕ್ರಮ ಮೊಟಕುಗೊಳಿಸಿ ಶಾಸಕರು ಇಂದು ರಾತ್ರಿ ಆಗಮಿಸಿ ಮೃತರ ಅಂತಿಮ ದರ್ಶನ ಪಡೆಯಲಿದ್ದಾರೆ
Dailyhunt
Disclaimer: This content has not been generated, created or edited by Dailyhunt. Publisher: themangaloremirror