ಉಡುಪಿ ಜುಲೈ 22: ಕಲ್ಯಾಣಪುರ ಸಂತೆಕಟ್ಟೆ ಪ್ರದೇಶದಲ್ಲಿ ಬೃಹತ್ ಗಾತ್ರದ ಮರವೊಂದು ಏಕಾಏಕಿ ರಸ್ತೆಗೆ ಧರೆಗುರುಳಿದ ಘಟನೆ ನಡೆದಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುವ ಸರ್ವಿಸ್ ರಸ್ತೆಯ ಮೇಲೆ ಮರ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ ಸುಮಾರು ಒಂದು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮರವನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.

