Dailyhunt Logo
  • Light mode
    Follow system
    Dark mode
    • Play Story
    • App Story
DK Shivakumar: ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಪ್ರಮಾಣವಚನ ತುಂಬಾ ಸರಳ, ಹೇಗಿರಲಿದೆ 'ಬಂಡೆ ಸಾಮ್ರಾಜ್ಯ' !

DK Shivakumar: ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಪ್ರಮಾಣವಚನ ತುಂಬಾ ಸರಳ, ಹೇಗಿರಲಿದೆ 'ಬಂಡೆ ಸಾಮ್ರಾಜ್ಯ' !

TimesNowSuddi 1 week ago

CLP Leader DK Shivakumar:ಅಂತೂ ಇಂತೂ ಕನಕಪುರ ಬಂಡೆ ಎಂದೇ ಖ್ಯಾತಿ ಪಡೆದಿರುವ ಡಿಕೆ ಶಿವಕುಮಾರ್ (DK Shivakumar)ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಅವರು ಜೂನ್ 3 ರ ಸಂಜೆ 4.05 ಕ್ಕೆ ಸರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಿಂದ ಅವರು ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡರಾಗಿರುವ ಅವರ ಪದಗ್ರಹಣ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಬೇಕಾಗಿತ್ತು. ಆದರೆ, ಅತ್ಯಂತ ಸರಳ ರೀತಿಯಲ್ಲಿ ಲೋಕಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಕಾರಣವೇನು? ಡಿಕೆ ಶಿವಕುಮಾರ್ ಅವರು ಅಂದುಕೊಂಡಿದ್ದು ಏನು ಇಲ್ಲಿದೆ ಸಂಪೂರ್ಣ ವಿವರ.

ಕಳೆದ 6 ತಿಂಗಳುಗಳಿಂದ ಹರಸಾಹಸ ಮಾಡಿ, ವರಿಷ್ಠರ ಮನವೊಲಿಸಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಧಾನವನ್ನು ಅಲಂಕರಿಸಲಿದ್ದಾರೆ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದರ ಮೂಲಕ ಅವರ ಹಾದಿ ಸುಗಮಗೊಂಡು, ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಹೇಳಿತ್ತು ಹಾಗೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಇದೀಗ ಉಳಿದದ್ದು ಅವರ ಪ್ರಮಾಣ ವಚನ ಕಾರ್ಯಕ್ರಮ.

ಈ ಕಾರ್ಯಕ್ರಮವನ್ನು ಸಾಕಷ್ಟು ಅದ್ದೂರಿಯಿಂದ ವಿಧಾನಸೌಧದ ಮುಂಭಾಗ ಪದಗ್ರಹಣ ಕಾರ್ಯಕ್ರಮ ನಡೆಸಬೇಕೆಂದು ಡಿಕೆ ಶಿವಕುಮಾರ್ ಇಚ್ಚೆ ಪಟ್ಟಿದ್ದರು. ಅದಕ್ಕಾಗಿ ಅವರು ಸ್ಥಳದ ಪರಿಶೀಲನೆ ನಡೆಸಿದ್ದರು. ಆದರೆ, ಈ ಸಂದರ್ಭದಲ್ಲಿಯೇ ಹೈಕಮಾಂಡ್ ನಿಂದ ಬಂದ ಸುದ್ದಿಯೊಂದು ಅವರ ಆಸೆಗೆ ತಣ್ಣೀರೆರೆಚಿತು.

ಗ್ಲಾಸ್ ಹೌಸ್ ಗೆ ಕಾರ್ಯಕ್ರಮ ಶಿಫ್ಟ್

ಕೆಪಿಸಿಸಿ ಕಾರ್ಯಧ್ಯಕ್ಷ ಜಿ ಸಿ ಚಂದ್ರಶೇಖರ್ ಹೈಕಮಾಂಡ್ ಸಂದೇಶವನ್ನು ರವಾನೆ ಮಾಡಿದ್ದು, ನೂತನವಾಗಿ ಸಿಎಂ ಪ್ರಮಾಣವಚನ ಕಾರ್ಯಕ್ರಮ ಲೋಕಭವನದ ಗ್ಲಾಸ್ ಹೌಸ್ ನಲ್ಲಿ ನಡೆಯಲಿದೆ. ಪಕ್ಷದ ವತಿಯಿಂದ ಇದನ್ನು ನಿರ್ಧಾರಿಸಲಾಗಿದೆ ಎಂದು ತಿಳಿಸಿದ್ದರು.
Karnataka Great Leaders: ಹೋರಾಟದ ಹಾದಿಯಿಂದ ಬಂದ ನಾಯಕರು, ಯಡಿಯೂರಪ್ಪ, ದೇವೇಗೌಡರ ಸಾಲಿಗೆ ಸೇರಿದ ಸಿದ್ದರಾಮಯ್ಯ
ದೇಶದಲ್ಲಿ ತೈಲ ಬೆಲ ಏರಿಕೆ ಆಗಿದೆ, ಅದಕ್ಕೆ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಬೇಡ ಹಾಗೆಯೇ, ಸಾರ್ವಜನಿಕವಾಗಿ ಯಾರಿಗೂ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಆಡಂಬರದ ಕಾರ್ಯಕ್ರಮ ಬೇಡ ಎಂದು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದರು.

ಒಂದು ವೇಳೆ ಅದ್ದೂರಿ ಕಾರ್ಯಕ್ರಮ ನಡೆಸಿ, ಸಾವಿರಾರು ಜನರು ವಿಧಾನಸೌಧದ ಮುಂದೆ ಜಮಾಯಿಸಿದರೆ, ಸಾಕಷ್ಟು ಸಮಸ್ಯೆಗಳು ಕಾಡಲಿವೆ, ವಿರೋಧ ಪಕ್ಷದವರ ಟೀಕೆಗೂ ಗುರಿಯಾಗಬೇಕಾಗುತ್ತದೆ ಎಂಬ ಕಾರಣದಿಂದ ಕಾರ್ಯಕ್ರಮವನ್ನು ವಿಧಾನಸೌಧದಿಂದ ಲೋಕಭವನಕ್ಕೆ ಶಿಫ್ಟಾ ಆಗಿದೆ.

ಆದರೆ, ಅವರು ಕಳೆದ ಚುನಾವಣಾ ಪ್ರಮಾಣಪತ್ರದಲ್ಲಿ ಘೋಷಿಸಿದಂತೆ, ಅತ್ಯಂತ ಶ್ರೀಮಂತ ಶಾಸಕ ಮುಖ್ಯಮಂತ್ರಿ ಸ್ಥಾನಕ್ಕೇ ಏರುತ್ತಿದ್ದಾರೆ. ಮೊದಲ ಬಾರಿಗೆ ಸಿಎಂ ಹುದ್ದೆ ಅಲಂಕರಿಸುತ್ತಿರುವ ಅವರ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿರಲಿದೆ ಎಂದು ಊಹೆ ಮಾಡಿದ್ದ ಅವರ ಅಭಿಮಾನಿಗಳಿಗೆ ಸಾಕಷ್ಟು ನಿರಾಶೆಯಾಗಿದೆ.

ಗ್ಲಾಸ್ ಹೌಸ್ ನಲ್ಲಿ ಕೇವಲ 700 ರಿಂದ 800 ಜನ ಮಾತ್ರ ಸೇರಬಹುದು. ಹಾಗೆಯೇ ಈ ಬಾರಿ ಯಾರಿಗೂ ಪಾಸ್ ವಿತರಣೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಆಗಮಿಸದಂತೆ ಅವರು ಒತ್ತಾಯಿಸಿದ್ದಾರೆ.

ಕ್ಯಾಬಿನೆಟ್ ಹೇಗಿರಲಿದೆ ?

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರ ಸಂದರ್ಭದಲ್ಲಿ ಅವರೊಂದಿಗೆ ಒಟ್ಟು 10 ಜನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಇದು ಇದುವರೆಗೂ ಸ್ಪಷ್ಟವಾಗಿಲ್ಲ.

ಸಚಿವಾಕಾಂಕ್ಷಿಗಳ ಪಟ್ಟಿ ಸಾಕಷ್ಟು ಉದ್ದವಾಗಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ತಮ್ಮ ತಮ್ಮ ಆಪ್ತರ ಪಟ್ಟಿಯೊಂದಿಗೆ ನವದೆಹಲಿಗೆ ತೆರಳಲಿದ್ದಾರೆ. ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿ ಫೈನಲ್ ಮಾಡಲಿದ್ದಾರೆ.

ಆದರೆ, ಈ ಪಟ್ಟಿಯಲ್ಲಿ ರಾಹುಲ್ ಗಾಂಧಿ ಅವರ ಅಪೇಕ್ಷೆಯಲ್ಲಿ ಯುವಕರೇ ಹೆಚ್ಚಾಗಿ ಸ್ಥಾನ ಪಡೆಯಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲು ರಾಹುಲ್ ಗಾಂಧಿ ಅವರು ಅಪೇಕ್ಷೆ ಪಟ್ಟಿರುವ ಹಿನ್ನೆಲೆಯಲ್ಲಿ ಅವರಿಗೆ ಹೆಚ್ಚಿನ ಸಚಿವ ಸ್ಥಾನಗಳು ಸಿಗಲಿವೆ ಎಂದು ಅಂದಾಜಿಸಲಾಗಿದೆ.

ಡಿಸಿಎಂ ಹುದ್ದೆ ಕ್ಯಾನ್ಸಲ್!

ಕಾಂಗ್ರೆಸ್ ವಲಯದಲ್ಲಿ ಜಾತಿಗೆವೊಂದರಂತೆ ಉಪಮುಖ್ಯಮಂತ್ರಿ ಸ್ಥಾನ ಅಂದರೆ ನಾಲ್ಕು ಡಿಸಿಎಂ ಸ್ಥಾನ ಕಲ್ಪಿಸಬೇಕೆಂದು ಆಗ್ರಹಿಸಲಾಗಿತ್ತು. ಇದಕ್ಕಾಗಿ ಸಾಕಷ್ಟು ಮುಖಂಡರು ನಾನಾ ರೀತಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಮತ್ತು ವರಿಷ್ಠರ ಮೇಲೆ ಒತ್ತಡಸ ಹೇರಿದ್ದರು. ಡಿಸಿಎಂ ಸ್ಥಾನಕ್ಕೆ ಸಾಕಷ್ಟು ಒತ್ತಡಗಳು ಬಂದಿರುವ ಹಿನ್ನಲೆಯಲ್ಲಿ ಡಿಸಿಎಂ ಸ್ಥಾನಕ್ಕೆ ಯಾರನ್ನೂ ಆಯ್ಕೆ ಮಾಡದೇ ಇರಲು ಪಕ್ಷ ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಡಿಕೆ ಶಿವಕುಮಾರ್ ಅವರು ಒಬ್ಬರೇ ಡಿಸಿಎಂ ಆಗಿದ್ದರು. ಆದರೆ, ಅವರು ಸಿಎಂ ಆದ ಮೇಲೆ ಇದೀಗ ಡಿಸಿಎಂ ಸ್ಥಾನ ತೆಗೆದುಹಾಕಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿರುವ ಮಾತಾಗಿದೆ. ಆದರೆ, ಹೈಕಮಾಂಡ್ ತೀರ್ಮಾನ ಮಾಡಿದಾಗ ಡಿಕೆ ಶಿವಕುಮಾರ್ ಅವರು ಏನು ಮಾಡಲು ಸಾಧ್ಯ ಎಂಬ ಜಿಜ್ಞಾಸೆಯೂ ಕೇಳಿಬಂದಿದೆ.
El Nino Explained: ಎಲ್‌ ನಿನೋ ಎಂದರೆ ಏನು?; ಇದು ಭಾರತದಲ್ಲಿ ಮುಂಗಾರು ವಿಳಂಬಕ್ಕೆ ಕಾರಣ ಹೇಗೆ?
ಇನ್ನೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪಟ್ಟಿಗಳು ಹರಿದಾಡುತ್ತಿವೆ. ಅವುಗಳಲ್ಲಿ ಅನೇಕರ ಹೆಸರು ಮಾಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಂಚಲನವನ್ನುಂಟು ಮಾಡಿದೆ. ಡಿಕೆ ಶಿವಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ಈ ಹಿಂದಿನ ಸರ್ಕಾರದಲ್ಲಿ ಸಚಿವೆಯಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೆಸರೇ ಇಲ್ಲ ಎಂಬ ಪಟ್ಟಿ ಹರಿದಾಡುತ್ತಿದೆ. ಆದರೆ, ಈ ಪಟ್ಟಿ ಸತ್ಯವೋ ಅಥವಾ ಸುಳ್ಳೋ ಎನ್ನುವುದು ಜೂನ್ 3 ರ ಸಂಜೆ 4 ಗಂಟೆಗೆ ಸ್ಪಷ್ಟವಾಗಲಿದೆ.

ಏನೇ ಆದರೂ, ಸಾಕಷ್ಟು ಹೋರಾಟದಿಂದ ಸಿಎಂ ಹುದ್ದೆಗೇರುತ್ತಿರುವ ಡಿಕೆ ಶಿವಕುಮಾರ್ ಅವರ ಮುಂದೆ ಸಾಕಷ್ಟು ಸಮಸ್ಯೆಗಳಿದ್ದು, ಅವುಗಳನ್ನು ಅವರು ಯಾವ ರೀತಿಯಲ್ಲಿ ನಿಭಾಯಿಸಲಿದ್ದಾರೆ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

Read more news like this on kannada.timesnownews.com

Dailyhunt
Disclaimer: This content has not been generated, created or edited by Dailyhunt. Publisher: TimesNowSuddi