ಆಳಂದ: ಪದೇ ಪದೇ ಹಿಂದೂಗಳಿಗೆ ಅವಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ (Protest Against Government) ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಘೋಷಿಸಿದ್ದಾರೆ.
ಅಲ್ಲದೆ ನಾನು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿಕೆ ಶಿವಕುಮಾರ್ ವ್ಯವಹಾರದಲ್ಲಿ ಪಾಲುದಾರರು (business partners)ಎಂಬ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಆಳಂದದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ವಿವಾದಿತ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಮಂದಿರದ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಪಾಪಸ್ ಪಡೆದು, ಹಿಂದೂಗಳಿಗೆ ಅಪಮಾನ ಮಾಡಿದೆ. ಈ ಸರ್ಕಾರ ಪದೇ ಪದೇ ಇಂತಹುದೇ ತೀರ್ಮಾನ ಕೈಗೊಳ್ಳುತ್ತಿದೆ. ಇದನ್ನು ಬಿಜೆಪಿ ಖಂಡಿಸಲಿದೆ ಎಂದು ಹೇಳಿದರು.
ಸರ್ಕಾರದ ನಡೆ ಖಂಡಿಸಿ ಕಲಬುರಗಿಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ವಿರುದ್ಧ ಪ್ರತಿಭಟನೆ ನಡೆಸಿ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಎಚ್ಚರಿಸಿದರು.
ಜನಜಾಗೃತಿ ಮೂಡಿಸುವ ಕೆಲಸ
ಪದೇ ಪದೇ ಹಿಂದೂಗಳಿಗೆ ಅಪಮಾನ ಮಾಡುತ್ತಿರುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು. ಈ ಸರ್ಕಾರ ಕೇವಲ ಅಲ್ಪಸಂಖ್ಯಾತರ ಓಟಿನಿಂದಲೇ ಅಧಿಕಾರಕ್ಕೆ ಬಂದಿದ್ದೇವೆ ಎಂದು ಭ್ರಮೆಯಲ್ಲಿದೆ. ಹಿಂದೂ ಭಾವನೆಗಳಿಗ ಧಕ್ಕೆ ತರುವ, ಹಿಂದೂಗಳ ಮತ ಬೇಡವೇ ಬೇಡ ಅನ್ನೋ ಉದ್ದೇಶ ಇದ್ದ ರೀತಿ ಇದೆ. ಇದನ್ನೆಲ್ಲ ನೋಡಿಕೊಂಡು ಕೈ ಕಟ್ಟಿ ಕೂರುವುದಿಲ್ಲ ಎಂದು ತಿಳಿಸಿದರು.
Zameer Ahmad Khan: ವೈರಲ್ ಆಡಿಯೋದಿಂದ ಸಚಿವ ಸ್ಥಾನಕ್ಕೆ ಆಪತ್ತು?; ಜಮೀರ್ ಅಹ್ಮದ್ ಖಾನ್ ಕೊಟ್ಟ ಸ್ಪಷ್ಟನೆ ಹೀಗಿದೆ..
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲೂ ಕೂಡ 'ಮೂರಿನ ಕಟ್ಟೆ' ಮರುನಿರ್ಮಾಣ ವಿಷಯಕ್ಕೆ ಗಲಭೆ ನಡೆದಿತ್ತು. ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಹಿಂದೂ ಕಾರ್ಯಕರ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ ಎಂದರು.
ಯಾರೇ ಸಿಎಂ ಆದರೂ ಅಭಿವೃದ್ಧಿ ಮಾತ್ರ ಶೂನ್ಯ
ರಾಜ್ಯದಲ್ಲಿ ಯಾರೇ ಸಿಎಂ ಆದರೂ ಅಭಿವೃದ್ಧಿ ಮಾತ್ರ ನಡೆಯುವುದಿಲ್ಲ. ಕಳೆದ ಮೂರು ವರ್ಷವೂ ಏನೂ ಅಭಿವೃದ್ಧಿ ಕಾರ್ಯ ಆಗಿಲ್ಲ. ಯಾವುದೇ ಹೊಸ ಯೋಜನೆ ಇಲ್ಲ. ಇರುವುದಕ್ಕೆ ಹಣ ನೀಡಿಲ್ಲ. ಈ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿಕೊಂಡು ಭ್ರಷ್ಟಾಚಾರದಲ್ಲಿ ಮುಳುಗಿತ್ತು ಎಂದು ಆರೋಪಿಸಿದರು. 
ಗ್ಯಾರಂಟಿಗಳಿಂದ ತನ್ನ ಕೈಯನ್ನು ಸರ್ಕಾರ ಕಟ್ಟಿಕೊಂಡಿದೆ. ಯುವಕರಿಗೆ ಉದ್ಯೋಗ ನೀಡಲಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಮೀಸಲಾತಿ ವಿಚಾರದಲ್ಲಿ ಗೊಂದಲ ಮಾಡಿಕೊಂಡರು. ಹೈಕೋರ್ಟ್ ನಲ್ಲೂ ಸರಿಯಾಗಿ ವಾದ ಮಂಡನೆ ಮಾಡಲಿಲ್ಲ. ಮೀಸಲಾತಿ ಗೊಂದಲದಿಂದಾಗಿ ಲಕ್ಷಾಂತರ ಯುವಕರು ಉದ್ಯೋಗ ವಂಚಿತರಾದರು. ಅವರ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಹೊಸ ಸರ್ಕಾರದಿಂದ ಯಾವುದನ್ನೂ ನಿರೀಕ್ಷಿಸಬೇಡಿ ಎಂದರು.
ಮಕ್ಕಳಲ್ಲಿ ದ್ವೇಷ ಭಾವನೆ ಬಿತ್ತುವ ಕೆಲಸ..
ಶಾಲೆಗಳಲ್ಲಿ ಹಿಜಾಬ್ಗೆ ಅವಕಾಶ ನೀಡಿರುವ ಸರ್ಕಾರ ಮಕ್ಕಳಲ್ಲಿ ದ್ವೇಷ ಭಾವನೆ ಬಿತ್ತುತ್ತಿದೆ. ಶಾಲಾ- ಕಾಲೇಜುಗಳಿಗೆ ವಿದ್ಯಾರ್ಜನೆಗೆ ಮಕ್ಕಳು ಬರುತ್ತಾರೆ. ಅಲ್ಲಿ ಒಂದೇ ರೀತಿಯ ಸಮವಸ್ತ್ರ ಇರಬೇಕು. ಅಧಿಕಾರದ ಅಮಲು ಮತ್ತು ಮದದಿಂದ ಏನು ಬೇಕಾದರೂ ತೀರ್ಮಾನ ಮಾಡಬಹುದು ಎಂಬ ಅಹಂನಲ್ಲಿ ಈ ಸರಕಾರ ಇದೆ. ಎಲ್ಲವನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದರು.
ನಾನು ಡಿಕೆ ಶಿವಕುಮಾರ್ ವ್ಯವಹಾರ ಪಾಲುದಾರರು?
ತಾವು ಡಿ.ಕೆ.ಶಿವಕುಮಾರ್ ಅವರು ವ್ಯವಹಾರ ಪಾಲುದಾರರು ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ ಅವರು, ಯಾವ ಮುಠ್ಠಾಳ ಹೇಳುತ್ತಾನೆ ಎಂಬ ಮಾಹಿತಿ ಇಲ್ಲ. ನಾನು ಮತ್ತು ಡಿಕೆಶಿ ಪಾಲುದಾರರು ಎಂಬುದು ಮೂರ್ಖತನದ ಹೇಳಿಕೆ ಎಂದು ಕಿಡಿಕಾರಿದರು. ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಬಗ್ಗೆ ಎಲ್ಲವೂ ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದರು.
Read more news like this on kannada.timesnownews.com

