Tuesday, 04 May, 9.25 pm TV9 ಕನ್ನಡ

ತಾಜಾ ಸುದ್ದಿ
ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಬಂಧಿತರಾಗಿದ್ದವರಿಗೆ ಜಾಮೀನು

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಪೊಲೀಸ್ ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿದ್ದ ದೇಶದ್ರೋಹದ ಆರೋಪದಡಿ ಬಂಧಿತರಾಗಿದ್ದ ಇಬ್ಬರು ವ್ಯಕ್ತಿಗಳಿಗೆ ಮದ್ರಾಸ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪೊಲೀಸ್ ಎನ್​ಕೌಂಟರ್ ಒಂದರಲ್ಲಿ ಹತನಾಗಿದ್ದ ಮಾವೋವಾದಿ ನಾಯಕನ ಪರ ಪ್ರತಿಭಟನೆಯಲ್ಲಿ ಘೋಷಣೆ ಕೂಗಿದ್ದ ಆರೋಪದಡಿ ಇವರನ್ನು ಬಂಧಿಸಲಾಗಿತ್ತು. 2019ರಲ್ಲಿ ನಡೆದ ಈ ಘಟನೆಯಲ್ಲಿ ಇಬ್ಬರು ಪ್ರತಿಭಟನಾಕರರು ಎನ್​ಕೌಂಟರ್ ಆದ ಮಾವೋವಾದಿ ನಾಯಕನ ಪರ ಘೋಷಣೆ ಕೂಗಿದ್ದರು ಎಂದು ಆರೋಪಿಸಲಾಗಿತ್ತು.

ಆರೋಪಿಗಳ ಜಾಮೀನು ನಿರಾಕರಣೆ ಅರ್ಜಿಯನ್ನು ನಿರಾಕರಿಸುವಂತೆ ಮನವಿ ಮಾಡಿದ ಪ್ರಾಸಿಕ್ಯೂಟರ್, ಆರೋಪಿಗಳು ನಿಷೇಧಿತ ಸಂಘಟನೆಯೊಂದರ ಬೆಂಬಲಿಗರಾಗಿದ್ದಾರೆ. ಜತೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪೊಲೀಸ್ ಸಿಬ್ಬಂದಿಯ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ಕಾರಣಗಳಿಂದ ಜಾಮೀನು ನೀಡಬಾರದು ಎಂದು ಕೋರ್ಟ್​ಗೆ ಮನವಿ ಮಾಡಿದರು.

ಆದರೆ ಈ ವಾದಕ್ಕೆ ಪ್ರತ್ಯುತ್ತರಿಸಿದ ಆರೋಪಿಗಳ ಪರ ವಕೀಲರು, ಘಟನೆಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಹೀಗಾಗಿ ಜಾಮೀನು ನೀಡಬೇಕೆಂದು ಕೋರಿಕೊಂಡರು. ಅವರ ಕೋರಿಕೆಯನ್ನು ಮನ್ನಿಸಿದ ಮದ್ರಾಸ್ ಹೈಕೋರ್ಟ್ ಇಬ್ಬರಿಗೂ ಜಾಮೀನು ನೀಡಿತು.

ಇದನ್ನೂ ಓದಿ: ಕರ್ನಾಟಕದ ಆಕ್ಸಿಜನ್ ಕೋಟಾ ಹೆಚ್ಚಿಸ್ತೀರೋ ಇಲ್ಲವೋ? ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಎಚ್ಚರಿಕೆ

Covid Lockdown: ಕೋವಿಡ್ 2ನೇ ಅಲೆಗೆ ಕಡಿವಾಣ ಹಾಕಲು ಲಾಕ್​ಡೌನ್ ಹೇರಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸೂಚನೆ

(Madras High Court grants bail accused slogans against PM Narendra Modi)

The post ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಬಂಧಿತರಾಗಿದ್ದವರಿಗೆ ಜಾಮೀನು appeared first on TV9 Kannada.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: TV9 Kannada
Top