Dailyhunt
ಖ್ಯಾತ ಪತ್ರಕರ್ತ ರೋಹಿತ್ ಸರ್ದಾನ ನಿಧನ

ಖ್ಯಾತ ಪತ್ರಕರ್ತ ರೋಹಿತ್ ಸರ್ದಾನ ನಿಧನ

ದೆಹಲಿ: ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತರಾಗಿದ್ದ ರೋಹಿತ್ ಸರ್ದಾನ ಅವರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿತರಾಗಿದ್ದ ಅವರು ಶುಕ್ರವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಏಪ್ರಿಲ್ 24ರಂದು ರೋಹಿತ್ ಸರ್ದಾನ ಅವರಿಗೆ ಕೊರೊನಾ ಸೋಂಕು ತಗಲಿತ್ತು. ಈ ಬಗ್ಗೆ ಸರ್ದಾನ ಅವರೇ ಟ್ವೀಟ್ ಮಾಡಿದ್ದರು. ಒಂದು ವಾರದ ಹಿಂದೆ ಜ್ವರ ಮತ್ತು ಇತರ ಲಕ್ಷಣ ಕಾಣಿಸಿಕೊಂಡಾಗ ಪರೀಕ್ಷೆ ನಡೆಸಿದೆ. RTPCR ನೆಗೆಟಿವ್ ಬಂತು. CTScan ಮಾಡಿಸಿದಾಗ ಕೊವಿಡ್ ಇರುವುದು ದೃಢಪಟ್ಟಿದೆ. ಈಗ ಆರೋಗ್ಯ ಸುಧಾರಿಸಿದೆ. ನೀವು ಕೂಡಾ ನಿಮ್ಮ ಮತ್ತು ನಿಮ್ಮ ಕುಟುಂಬದ ಕಾಳಜಿ ವಹಿಸಿ ಎಂದಿದ್ದರು.

ರೋಹಿತ್ ನಿಧನ ಸುದ್ದಿಯನ್ನು ಜೀ ನ್ಯೂಸ್​ನ ಪ್ರಧಾನ ಸಂಪಾದಕ ಸುಧೀರ್ ಚೌಧರಿ ಟ್ವೀಟ್ ಮಾಡಿದ್ದು, ಕೆಲವು ಹೊತ್ತಿನ ಹಿಂದೆ ಇವಾನ್​ ಕರೆ ಮಾಡಿ ವಿಷಯವೊಂದನ್ನು ಹೇಳಿದಾಗ ನನ್ನ ಕೈಕಾಲು ಕಂಪಿಸಿತು.

ನನ್ನ ಗೆಳೆಯ ಹಾಗು ಸಹೋದ್ಯೋಗಿ ರೋಹಿತ್ ಸರ್ದಾನ ಅವರ ನಿಧನ ಸುದ್ದಿಯಾಗಿತ್ತು ಅದು . ನಮ್ಮ ಆಪ್ತರೊಬ್ಬರು ವೈರಸ್​ಗೆ ಬಲಿಯಾಗುತ್ತಾರೆ ಎಂದು ಊಹಿಸಿರಲಿಲ್ಲ. ಈ ಸುದ್ದಿಯನ್ನು ಸ್ವೀಕರಿಸಲು ನಾನು ಸಿದ್ಧನಿರಲಿಲ್ಲ. ಭಗವಂತ ಮೋಸ ಮಾಡಿಬಿಟ್ಟ ಎಂದು ಬರೆದಿದ್ದಾರೆ

ರೋಹಿತ್ ಸರ್ದಾನ ನಿಧನ ಬಗ್ಗೆ ಸಂತಾಪ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ , ದೇಶವು ಇಂದು ಧೈರ್ಯಶಾಲಿ, ಪಕ್ಷಾತೀತ ವರದಿ ಮಾಡುತ್ತಿದ್ದ ಪತ್ರಕರ್ತರನ್ನು ಕಳೆದುಕೊಂಡಿದೆ. ಈ ನಷ್ಟ ಭರಿಸಲು ಭಗವಂತ ಅವರ ಕುಟುಂಬಕ್ಕೆ ಶಕ್ತಿ ನೀಡಲಿ ಎಂದಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Udayavani