Dailyhunt Logo
  • Light mode
    Follow system
    Dark mode
    • Play Story
    • App Story
ಪುನರ್ವಸು  ಮಳೆಯ ಅಬ್ಬರ: ಜು.8 ರಂದು ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

ಪುನರ್ವಸು ಮಳೆಯ ಅಬ್ಬರ: ಜು.8 ರಂದು ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬುಧವಾರ (ಜುಲೈ 8) ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ತಹಶೀಲ್ದಾರ್ ರಂಜಿತ್ ಆದೇಶದಂತೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

ರಜೆಯಿಂದ ಉಂಟಾಗುವ ಶೈಕ್ಷಣಿಕ ನಷ್ಟವನ್ನು ಮುಂದಿನ ರಜಾದಿನಗಳಲ್ಲಿ ಸರಿಹೊಂದಿಸಿಕೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Udayavani