Dailyhunt Logo
  • Light mode
    Follow system
    Dark mode
    • Play Story
    • App Story
ಕೊಲ್ಲೂರು | ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಕ್ಕೆ ಕನ್ನ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ

ಕೊಲ್ಲೂರು | ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಕ್ಕೆ ಕನ್ನ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ

ಕೊಲ್ಲೂರು: ಮೇ 17ರ ಮಧ್ಯಾಹ್ನ ಕೊಲ್ಲೂರು ದಳಿ ಎಂಬಲ್ಲಿ ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ನಡುವೆ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಮೃತರಾಗಿ ಹಲವರು ಗಾಯಗೊಂಡಿದ್ದು ಮೃತ ಮಹಿಳೆಯ ಚಿನ್ನಾಭರಣಕ್ಕೆ ಕನ್ನ ಹಾಕಿದ ಘಟನೆ ವರದಿಯಾಗಿದೆ.

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಮೃತರ ಸಂಬಂಧಿಕರು ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಕಳೆದ ರವಿವಾರ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತರಾಗಿ ಮಕ್ಕಳು ಸಹಿತ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಕೇರಳ ಮೂಲದ ಜ್ಯೋತಿ ಹಾಗೂ ಆರಿಯಾ ಅನುಪ್ ಎನ್ನುವರು ಮೃತಪಟ್ಟಿದ್ದರು. ಅಪಘಾತದ ತೀವೃತೆಯ ಸಂದರ್ಭದಲ್ಲಿ ಮೃತ ಮಹಿಳೆ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಖದೀಮರು ಚಾಣಾಕ್ಷತನದಿಂದ ಕಳವು ಮಾಡಿದ್ದರು.

ಮೃತ ಜ್ಯೋತಿ ಕುಟುಂಬಸ್ಥರು ಈ ಶೋಕದಿಂದ ಚೇತರಿಸಿಕೊಂಡ ಬಳಿಕ ಒಡವೆಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮವಹಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi