ಮುಂಗೇರ್ (ಬಿಹಾರ), ಅ. 29: ಸೋಮವಾರ ನಡೆದ ದುರ್ಗಾ ಪೂಜೆ ಕಾರ್ಯಕ್ರಮದ ಸಂದರ್ಭ ಪೊಲೀಸರು ಹಾರಿಸಿದ ಗುಂಡಿಗೆ ಓರ್ವ ಸಾವನ್ನಪ್ಪಿದ ಪ್ರಕರಣದ ಕುರಿತು ಮುಂಗೇರ್ ಪೊಲೀಸ್ ಅಧೀಕ್ಷಕ ಹಾಗೂ ಜಿಲ್ಲಾ ದಂಡಾಧಿಕಾರಿ ಅವರನ್ನು ಕೂಡಲೇ ವಜಾಗೊಳಿಸುವಂತೆ ಚುನಾವಣಾ ಆಯೋಗ ಗುರುವಾರ ಆದೇಶಿಸಿದೆ.
ಬಿಹಾರ ವಿಧಾನ ಸಭೆ ಚುನಾವಣೆ ನಡೆಯಲಿರುವ ಎರಡು ದಿನ ಮುನ್ನ ಮುಂಗೇರ್ ಜಿಲ್ಲೆಯಲ್ಲಿ ಸಂಭವಿಸಿದ ಹಿಂಸಾಚಾರದ ತನಿಖೆಗೆ ಕೂಡ ಚುನಾವಣಾ ಆಯೋಗ ಆದೇಶ ನೀಡಿದೆ. ಮುಂಗೇರ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಂಗೇರ್ನ ಪೊಲೀಸ್ ಅಧೀಕ್ಷಕ ಹಾಗೂ ಜಿಲ್ಲಾ ದಂಡಾಧಿಕಾರಿ ಅವರನ್ನು ಕೂಡಲೇ ವಜಾಗೊಳಿಸಲು ಚುನಾವಣಾ ಆಯೋಗ ಆದೇಶಿಸಿದೆ.
ಈ ಸಂಪೂರ್ಣ ಘಟನೆಯನ್ನು ಮಗದದ ವಿಭಾಗೀಯ ಆಯುಕ್ತ ಅಸಂಗ್ಭಾ ಚುಬಾ ಆಒ ತನಿಖೆ ನಡೆಸುವಂತೆ ಹಾಗೂ ಮುಂದಿನ 7 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ ಎಂದು ಬಿಹಾರದ ಚುನಾವಣಾ ಆಯುಕ್ತರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

