Dailyhunt Logo
  • Light mode
    Follow system
    Dark mode
    • Play Story
    • App Story
ಪುತ್ತೂರು: ರಾಜ್ಯ ಫೈಝೀಸ್ ವತಿಯಿಂದ ರಬೀಹ್ ಕ್ಯಾಂಪೈನ್, ಮೌಲಿದ್ ಸಂಗಮ

ಪುತ್ತೂರು: ರಾಜ್ಯ ಫೈಝೀಸ್ ವತಿಯಿಂದ ರಬೀಹ್ ಕ್ಯಾಂಪೈನ್, ಮೌಲಿದ್ ಸಂಗಮ

ಪುತ್ತೂರು: ಪವಿತ್ರ ರಬೀಉಲ್ ಅವ್ವಲ್ ತಿಂಗಳ ಭಾಗವಾಗಿ ಕರ್ನಾಟಕ ರಾಜ್ಯ ಫೈಝೀಸ್ ಅಸೋಸಿಯೇಷನ್ ವತಿಯಿಂದ 'ಸಮಕಾಲೀನ ಸಮಸ್ಯೆಗಳಿಗೆ ಪ್ರವಾದಿ ಚರ್ಯೆ ಪರಿಹಾರ' ಎಂಬ ಘೋಷಣೆಯೊಂದಿಗೆ ರಬೀಹ್ ಕ್ಯಾಂಪೈನ್ ಪ್ರಯುಕ್ತ ಮೌಲಿದ್ ಮತ್ತು ಮದುಹುನ್ನೆಬೀ ಕಾರ್ಯಕ್ರಮ ಪುತ್ತೂರು ಸಿರಾಜುಲ್ ಹುದಾ ಮದ್ರಸಾದಲ್ಲಿ ನಡೆಯಿತು.

ರಾಜ್ಯ ಫೈಝೀಸ್ ಅಧ್ಯಕ್ಷ ಉಸ್ಮಾನುಲ್ ಫೈಝಿ ಅಧ್ಯಕ್ಷತೆ ವಹಿಸಿದ್ದರು. ‌‌‌‌ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಯ್ಯಿದ್ ಅಹ್ಮದ್ ಪೂಕೋಯ ತಂಙಳ್, ಪುತ್ತೂರು ಪ್ರವಾದಿಯ ಜನನದಿಂದ ಅನುಗ್ರಹೀತಗೊಂಡ ಈ ಪುಣ್ಯ ಮಾಸದಲ್ಲಿ ಪ್ರವಾದಿ ಪ್ರಕೀರ್ತನೆಗಳು ಎಲ್ಲೆಡೆ ಮೊಳಗುತ್ತಿದೆ. ಹಲವಾರು ಸಂಕಷ್ಟಗಳಿಂದ ಆವೃತವಾಗಿರುವ ಈಗಿನ ಪರಿಸ್ಥಿತಿಯಲ್ಲಿ ಈ ಪುಣ್ಯ ಪ್ರಕೀರ್ತನೆಗಳು ಎಲ್ಲದಕ್ಕೂ ಪರಿಹಾರ ಮಾರ್ಗವಾಗಿ ಪ್ರಯೋಜನಕಾರಿಯಾಗಲಿದೆ. ಅದರ ಭಾಗವಾಗಿ ನಡೆಯುವ ಮೌಲಿದ್ ಮಜ್ಲಿಸುಗಳು ಸಿರಿವಂತಿಕೆಯಿಂದ ಕೂಡಿರಲಿ ಎಂದು ತಿಳಿಸಿದರು.

ಸಯ್ಯಿದ್ ಎಸ್.ಎಂ ಮುಹಮ್ಮದ್ ತಂಙಳ್ ಸಾಲ್ಮರ ಮೌಲಿದ್ ಮಜ್ಲಿಸಿಗೆ ನೇತೃತ್ವ ನೀಡಿದರು. ರಾಜ್ಯ ಫೈಝೀಸ್ ಪ್ರಮುಖರಾದ ಮೂಸಲ್ ಫೈಝಿ, ಉಮರ್ ಫೈಝಿ ಸಾಲ್ಮರ ಮುಖ್ಯ ಭಾಷಣ ಮಾಡಿದರು. ಸಮಿತಿಯ ಕೋಶಾಧಿಕಾರಿ ಸುಲೈಮಾನ್ ಫೈಝಿ ಕಣಿಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು .

ಮುಖ್ಯ ಅತಿಥಿಗಳಾಗಿ ಅಬ್ದುಲ್ ಹಮೀದ್ ದಾರಿಮಿ ಸಂಪ್ಯ, ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ, ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಎಲ್.ಟಿ ಅಬ್ದುಲ್ ರಝಾಕ್ ಹಾಜಿ, ಪ್ರಧಾನ ಕಾರ್ಯದರ್ಶಿ ಹಾಜಿ ಯಾಕೂಬ್ ಖಾನ್ ಬಪ್ಪಳಿಗೆ, ಎಸ್ ವೈ ಎಸ್ ಪುತ್ತೂರು ವಲಯ ಅಧ್ಯಕ್ಷ ಅಬೂಬಕ್ಕರ್ ಮುಲಾರ್, ಜನತಾ ಸ್ಸ್ಕೇಲ್ ಬಝಾರ್ ಮಾಲಕ ಅಬ್ದುಲ್ ರಝಾಕ್ ಹಾಜಿ, ಪಿ.ಬಿ ಅಬ್ದುಲ್ಲ ಹಾಜಿ ಬಪ್ಪಳಿಗೆ, ಇಬ್ರಾಹಿಂ ಮುಸ್ಲಿಯಾರ್ ಸಾಲ್ಮರ, ಅಬ್ದುಲ್ ರಝಾಕ್ ಬನ್ನೂರು ಮೊದಲಾದವರು ಉಪಸ್ಥಿತರಿದ್ದರು .

ಸಿರಾಜುದ್ದೀನ್ ಫೈಝಿ ಮಾಡನ್ನೂರು ಸ್ವಾಗತಿಸಿ, ಅಹ್ಮದ್ ನಯೀಂ ಫೈಝಿ ವಂದಿಸಿದರು. ರಿಯಾಝ್ ಫೈಝಿ ಪಟ್ಟೆ ನಿರೂಪಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi