Dailyhunt Logo
  • Light mode
    Follow system
    Dark mode
    • Play Story
    • App Story
ಉಡುಪಿ: ರಾವಣನಂತೆ ಬಿಂಬಿಸಿದ ಯಶ್‌ಪಾಲ್ ಕಟೌಟ್‌ಗೆ ಮೊಟ್ಟೆ ಎಸೆತ: ಪ್ರತಿಕೃತಿ ದಹಿಸಿ ಆಕ್ರೋಶ

ಉಡುಪಿ: ರಾವಣನಂತೆ ಬಿಂಬಿಸಿದ ಯಶ್‌ಪಾಲ್ ಕಟೌಟ್‌ಗೆ ಮೊಟ್ಟೆ ಎಸೆತ: ಪ್ರತಿಕೃತಿ ದಹಿಸಿ ಆಕ್ರೋಶ

ಡುಪಿ, ಜು.31: ರಾಹುಲ್ ಗಾಂಧಿ ವಿರುದ್ಧ ಧ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಯಶ್‌ಪಾಲ್ ಸುವರ್ಣರನ್ನು 10 ತಲೆ ಹಾಗೂ ಎಂಟು ಕೈಗಳ ರಾವಣನಂತೆ ಬಿಂಬಿಸಿದ ಕಟೌಟ್ ಗಮನ ಸೆಳೆಯಿತು.

ಚಡ್ಡಿ ಧರಿಸಿರುವ ಯಶ್‌ಪಾಲ್, ಕೈಗಳಲ್ಲಿ ಮದ್ಯದ ಬಾಟಲಿ, ಐಸ್‌ಕ್ಯಾಂಡಿ, ಮೊಬೈಲ್, ಟವಲ್, ಜೋಕರ್ ಇಸ್ಪೀಟ್, ಮೆಲೋಡಿ ಚಾಕಟೇಲ್, ಚೊಂಬುಗಳನ್ನು ಹಿಡಿದುಕೊಂಡಿರುವಂತೆ ಕಟೌಟ್‌ನಲ್ಲಿ ಚಿತ್ರಿಸ ಲಾಗಿದೆ.

ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಈ ಕಟೌಟ್‌ಗೆ ಮೊಟ್ಟೆಗಳನ್ನು ಎಸೆದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಯಶ್‌ಪಾಲ್ ವಿರುದ್ಧ ಘೋಷಣೆ ಗಳನ್ನು ಕೂಗುತ್ತ ರಾವಣನಂತೆ ಬಿಂಬಿಸಲಾದ ಯಶ್‌ಪಾಲ್ ಸುವರ್ಣರ ಪ್ರತಿಕೃತಿಯನ್ನು ದಹಿಸಲಾಯಿತು.

Dailyhunt
Disclaimer: This content has not been generated, created or edited by Dailyhunt. Publisher: Varthabharathi