ಬೆಂಗಳೂರಿನ ಸಾರಕ್ಕಿ ಕೆರೆ ಸಮೀಪದ ನಿರ್ಜನ ಪ್ರದೇಶದಲ್ಲಿ ಮುರಳಿ ಅವರ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಮೃತದೇಹವನ್ನ ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಜೆಪಿ ನಗರ ಠಾಣೆಯ ಪೊಲೀಸರು ಮೃತದೇಹವನ್ನ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಕಲೆಯನ್ನೇ ಉಸಿರಾಗಿಸಿಕೊಂಡಿದ್ದ ಯುವ ನಟ ಮುರಳಿ!
ನಗುವಿನ ಹಿಂದಿನ ನೋವು ಯಾರಿಗೂ ತಿಳಿಯಲಿಲ್ಲ!
ನಟ ವೆಂಕಟೇಶ್ ಪ್ರಸಾದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಭಾವುಕವಾಗಿ ಪೋಸ್ಟ್ ಹಂಚಿಕೊಂಡಿದ್ದು, "ಸುಂದರ ಮುಖದ ಗೆಳೆಯ ಇಂದು ನಮ್ಮನ್ನೆಲ್ಲ ಬಿಟ್ಟೋದ. ತನ್ನ ನೋವನ್ನ ನಮ್ಮ ಬಳಿ ಒಂದೇ ಒಂದು ನಿಮಿಷ ಹಂಚಿಕೊಂಡಿದ್ದರೂ, ಏನಾದರೂ ಪರಿಹಾರ ಹುಡುಕಬಹುದಿತ್ತು. ಅವನ ನೋವನ್ನ ಅರ್ಥ ಮಾಡಿಕೊಳ್ಳದ ನಮಗೂ ಈ ಪಾಪಪ್ರಜ್ಞೆ ಕಾಡದೆ ಬಿಡದು" ಎಂದು ಕಂಬನಿ ಮಿಡಿದಿದ್ದಾರೆ.
ವೃತ್ತಿ ಜೀವನದಲ್ಲಿ ಪ್ರಗತಿ ಹೊಂದುತ್ತಿದ್ದ ಸಮಯದಲ್ಲಿಯೇ ಮುರಳಿ ಅವರು ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದೆ. ವೃತ್ತಿ ಬದುಕಿನ ಸಂಕಷ್ಟಗಳೋ ಅಥವಾ ವೈಯಕ್ತಿಕ ಸಮಸ್ಯೆಗಳೋ ಎಂಬುದು ಪೊಲೀಸ್ ತನಿಖೆಯಿಂದಷ್ಟೇ ತಿಳಿಯಬೇಕಿದೆ.

