ಬೆಂಗಳೂರು: ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕಾಗಿ ಅಸಮಾಧಾನಗೊಂಡ ಶಾಸಕರ ಮನವೋಲಿಕೆಗೆ ಕಾಂಗ್ರೆಸ್ ಮುಂದಾಗಿದೆ. ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು ಅಖಾಡಕ್ಕೆ ಇಳಿದಿದ್ದಾರೆ. ಸಚಿವ ಸ್ಥಾನ ಸಿಗದ ಆಕಾಂಕ್ಷಿ ಶಾಸಕರ ಮನೆಗೆ ಸಿಎಂ ಡಿಕೆ ಶಿವಕುಮಾರ್ ಅವರು ತೆರಳಿ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡಾ ಹಾಜರಿದ್ದರು.
ವಿಜಯ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಅವರ ಪುತ್ರ ಪ್ರಿಯ ಕೃಷ್ಣ ಅಥವಾ ಎಂ ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಅವರಿಗೆ ಸಂಪುಟದಲ್ಲಿ ಅವಕಾಶ ಸಿಕ್ಕಿಲ್ಲ. ಹೀಗಾಗಿ ಅವರು ಅಸಮಾಧಾನಗೊಂಡಿದ್ದರು.
ಕೃಷ್ಣಪ್ಪ ಬೆಂಬಲಿಗರು ಕೆಪಿಸಿಸಿ ಕಚೇರಿಗೆ ಆಗಮಿಸಿ ಗದ್ದಲ ಉಂಟು ಮಾಡಿದ್ದರು. ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರ ಹಾಕಿದ್ದರು. ಬಳಿಕ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅಸಮಾಧಾನಿತ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದರು. ಇದೇ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಅವರ ಬೆಂಬಲಿಗರೂ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು.
ಅಖಾಡಕ್ಕೆ ಡಿಕೆಶಿ
ಇದೇ ಸಂದರ್ಭದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಅಖಾಡಕ್ಕಿಳಿದಿದ್ದಾರೆ. ಬುಧವಾರ ಅವರು ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆಗೆ ವಿಜಯನಗರದಲ್ಲಿರುವ ಎಂ ಕೃಷ್ಣಪ್ಪ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಈ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್, ಮಾಗಡಿ ಬಾಲಕೃಷ್ಣ ಮತ್ತಿತರರು ಇದ್ದರು.ಇದಕ್ಕೂ ಮುನ್ನ ಅವರ ಗುಬ್ಬಿ ಶ್ರೀನಿವಾಸ್, ಯಶವಂತರಾಯಗೌಡ ಪಾಟೀಲ ಅವರ ಜೊತೆಗೂ ಫೋನ್ ಮೂಲಕ ಮಾತುಕತೆ ನಡೆಸಿದ್ದಾರೆ. ಅವರ ಅಸಮಾಧಾನವನ್ನು ತಣಿಸುವ ಪ್ರಯತ್ನ ನಡೆಸಿದ್ದಾರೆ. ಸಿಎಂ ಜೊತೆಗಿನ ಮಾತುಕತೆಯ ಬಳಿಕ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆ ವಾಪಸ್ ಪಡೆದುಕೊಂಡಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಾಜಿ ಸಚಿವ ಎಚ್ಕೆ ಪಾಟೀಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ದಿನೇಶ್ ಗುಂಡೂರಾವ್ ಕೂಡಾ ಉಪಸ್ಥಿತರಿದ್ದರು. ಎಚ್ ಕೆ ಪಾಟೀಲ್ ಅವರ ನಿವಾಸಕ್ಕೆ ಆಗಮಿಸಿದ್ದ ಹರಿಪ್ರಸಾದ್ ಕೆಲಹೊತ್ತು ಮಾತುಕತೆ ನಡೆಸಿ ಮನವೋಲಿಕೆ ಮಾಡಿದರು. ಇದಾದ ಬಳಿಕ ಬಿ ಕೆ ಹರಿಪ್ರಸಾದ್ ಮಾಜಿ ಸಚಿವರು, ಹಿರಿಯ ಶಾಸಕರಾದ ದಿನೇಶ್ ಗುಂಡೂರಾವ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಹರಿಪ್ರಸಾದ್, "ಎಚ್ ಕೆ ಪಾಟೀಲ್ ಹಿರಿಯ ಕಾಂಗ್ರೆಸ್ ನಾಯಕರು. ಅವರಿಗೆ ನೋವು ಆಗಿರಬಹುದು. ಮುಂದೆ ಸರಿಪಡಿಸೋಣ ಎಂದು ಆಶ್ವಾಸನೆ ನೀಡಲಾಗಿದೆ. ಎಲ್ಲರಿಗೂ ಅವಕಾಶಗಳು ಒಮ್ಮೊಮ್ಮೆ ಸಿಗಲ್ಲ, ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗಿದೆ. ಯಾರೂ ಬೇಸರ ಆಗುವುದಿಲ್ಲ. ಕಾಂಗ್ರೆಸ್ ದೊಡ್ಡ ಪಕ್ಷ, ಎಲ್ಲರಿಗೂ ಅವಕಾಶ ಸಿಗಲಿದೆ" ಎಂದರು.

