ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿರುವ ಕ್ರಮವನ್ನು ಖಂಡಿಸಿ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಭಾನುವಾರ (ಮಾರ್ಚ್ 31) ದಂದು ದೆಹಲಿಯ ರಾಮ್ಲೀಲಾ ಮೈದಾನದಲ್ಲಿ ಲೋಕತಂತ್ರ ಬಚಾವೋ ಹೆಸರಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಪ್ರತಿಭಟನೆಯಲ್ಲಿ ಅವರಿಂದ್ ಕೇಜ್ರಿವಾಲ್ ಪತ್ನಿ ಸುನಿತಾ, ಪಂಜಾಬ್ ಸಿಎಂ ಭಗವಂತ್ ಮಾನ್ ಕಾಂಗ್ರೆಸ್ ನಾಯಕರಾ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್ಸಿಪಿ, ಟಿಎಂಸಿ ಶಿವಸೇನೆ (UBT) ಸೇರಿದಂತೆ ಇಂಡಿಯಾ ಒಕ್ಕೂಟದ ನಾಯಕರು ಭಾಗಿಯಾಗಲಿದ್ದಾರೆ.
ಆರ್ಸಿಬಿ ಸೋಲಲು ವಿರಾಟ್ ಕೊಹ್ಲಿ ಕಾರಣ; ಕಿಡಿಕಾರಿದ ಮಾಜಿ ಕ್ರಿಕೆಟಿಗ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಪ್ರತಿಭಟನೆಗೆ ಕೆಲವು ಷರತ್ತಿನ ಮೇಲೆ ಅನುಮತಿ ನೀಡಲಾಗಿದೆ. ರಾಮಲೀಲಾ ಮೈದಾನದಿಂದ ಯಾವುದೇ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ. ಟ್ರಾಕ್ಟರ್ ರ್ಯಾಲಿ, ಶಸ್ತ್ರಾಸ್ತ್ರಗಳ ಬಳಕೆಗೆ ಅನುಮತಿ ಇಲ್ಲ. ರಾಜಕೀಯ ಪಕ್ಷಗಳ ಕಚೇರಿಗಳು ಇರುವ ದೀನದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.
ಮೈದಾನದ ಬಳಿ ಸಂಚಾರ ಹಾಗೂ ವಾಹನ ನಿಲುಗಡೆಯನ್ನು ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ. ರ್ಯಾಲಿಯಲ್ಲಿ ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ವ್ಯವಸ್ಥೆ ಮಾಡಲಾಗಿದೆ. ಪ್ರವೇಶ ಮತ್ತು ನಿರ್ಗಮನಕ್ಕಾಗಿ ಮೈದಾನದಲ್ಲಿ ಏಳು ಗೇಟ್ಗಳನ್ನು ಸಿದ್ಧಪಡಿಸಲಾಗಿದೆ. ಇದರಲ್ಲಿ ಒಂದು ಗೇಟ್ ಅನ್ನು ವಿಐಪಿಗಳಿಗೆ, ಮತ್ತೊಂದನ್ನು ಮಾಧ್ಯಮಕ್ಕೆ ಮೀಸಲಿಡಲಾಗಿದೆ ಎಂದು ಹಿರಿಯು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೆನ್ನೈ ವಿರುದ್ಧದ ಪಂದ್ಯ ಡೆಲ್ಲಿಯಿಂದ ಆಂಧ್ರಕ್ಕೆ ಶಿಫ್ಟ್; ಕಾರಣ ಹೀಗಿದೆ
ಅವಕಾಶ ಕೊಡದೇ ಇದ್ದರೂ ಬೇಸರ ಇಲ್ಲ… ಆದರೆ ಹೆಸರು ಬದಲಿಸುವುದಿಲ್ಲ: ನಟ ದರ್ಶನ್
ಚೆನ್ನೈ ವಿರುದ್ಧದ ಪಂದ್ಯ ಡೆಲ್ಲಿಯಿಂದ ಆಂಧ್ರಕ್ಕೆ ಶಿಫ್ಟ್; ಕಾರಣ ಹೀಗಿದೆ
