ಮೈಸೂರು:ಬುಡಕಟ್ಟು ಭಾಷೆಗಳು ನಶಿಸಿದರೆ ಕೇವಲ ಭಾಷೆಯಷ್ಟೇ ಅಲ್ಲದೆ, ಸಮುದಾಯದ ಸಂಸ್ಕೃತಿ, ಪರಂಪರೆ ಹಾಗೂ ಪಾರಂಪರಿಕ ಜ್ಞಾನವೂ ನಷ್ಟವಾಗುತ್ತದೆ ಎಂದು ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಟಿ.ರಘುಮೂರ್ತಿ ಎಚ್ಚರಿಸಿದರು.ನಗರದಲ್ಲಿ ಮೂರು ದಿನಗಳವರೆಗೆ ಆಯೋಜಿಸಿರುವ ಬುಡಕಟ್ಟು ಭಾಷೆಗಳು ಮತ್ತು ವಸ್ತು ಸಂಗ್ರಾಲಯಗಳ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.ಆಧುನೀಕತೆ, ತಂತ್ರಜ್ಞಾನಕ್ಕೆ ಸಿಲುಕಿ ಬುಡಕಟ್ಟು ಭಾಷೆ, ಸಂಸ್ಕೃತಿ, ಪರಂಪರೆಯೂ ಸಂಕಷ್ಟಕ್ಕೆ ಸಿಲುಕಿದೆ.

