ಶ್ರೀರಂಗಪಟ್ಟಣ: ಸಮಾಜದ ಹಿತಾಸಕ್ತಿ ಜತೆಗೆ ಜನರ ಸದೃಢ ಆರೋಗ್ಯಕ್ಕೆ ಚಂದ್ರವನ ಆಶ್ರಮ ಒತ್ತು ನೀಡಿದ್ದು, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿದೆ ಎಂದು ಪೀಠಾಧಿಪತಿ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಹೇಳಿದರು.
ಪಟ್ಟಣ ಹೊರವಲಯದ ಪಶ್ಚಿಮವಾಹಿನಿಯ ಚಂದ್ರವನ ಆಶ್ರಮದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ 161ನೇ ಬೆಳದಿಂಗಳ ದೀಪಾರತಿ, ಧಾರ್ಮಿಕ ಕಾರ್ಯಕ್ರಮ ಮತ್ತು ಆದಿ ಆರೋಗ್ಯ ಆಶ್ರಮ ಆಯುರ್ವೇದ ಆಸ್ಪತ್ರೆಯಲ್ಲಿ 3ನೇ ಸ್ವಾಸ್ಥ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಪಟ್ಟಣ ಹೊರವಲಯದ ಪಶ್ಚಿಮವಾಹಿನಿಯ ಚಂದ್ರವನ ಆಶ್ರಮದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ 161ನೇ ಬೆಳದಿಂಗಳ ದೀಪಾರತಿ, ಧಾರ್ಮಿಕ ಕಾರ್ಯಕ್ರಮ ಮತ್ತು ಆದಿ ಆರೋಗ್ಯ ಆಶ್ರಮ ಆಯುರ್ವೇದ ಆಸ್ಪತ್ರೆಯಲ್ಲಿ 3ನೇ ಸ್ವಾಸ್ಥ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಬೆಳಗಾವಿಯ ಹುಕ್ಕೇರಿಯ ಶ್ರೀಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬರು ಆರೋಗ್ಯವನ್ನು ಸಮಸ್ಥಿತಿಯಲ್ಲಿಟ್ಟುಕೊಳ್ಳಲು ಇಂತಹ ಸ್ವಾಸ್ಥ್ಯ ಶಿಬಿರದಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.
ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷೆ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಮೈಸೂರಿನ ಸಿವಿಲ್ ನ್ಯಾಯಾಧೀಶೆ ಶಿಲ್ಪ ಹಾಗೂ ಬೆಂಗಳೂರಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಅ.ಭಾ.ವೀ.ಲಿಂ.ಮ. ಸಭಾದ ಅಧ್ಯಕ್ಷ ಎಸ್.ಸುರೇಶ್, ಕ್ಷಣಾಂಬಿಕ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಶಾಸ್ತ್ರಿ, ಜಿಲ್ಲೆಯ ಅ.ಭಾ.ವೀ.ಲಿಂ.ಮ.ಸಭಾದ ಅಧ್ಯಕ್ಷ ತಾಳಶಾಸನ ಆನಂದ್, ಡಾ.ಎಂ.ಎಸ್. ಮಧುಮತಿ, ಡಾ.ಎನ್.ನಾಗೇಶ್ ಇತರರು ಇದ್ದರು.
ಇನ್ನಷ್ಟು ಓದಿ

