Dailyhunt
ಗ್ಯಾರಂಟಿ ಯೋಜನೆಗಳ ಸವಲತ್ತು ಪಡೆದರೆ ಸ್ವಾಭಿಮಾನ ಮಾರಿಕೊಂಡಂತೆ: ನಟ ಜಗ್ಗೇಶ್​

ಗ್ಯಾರಂಟಿ ಯೋಜನೆಗಳ ಸವಲತ್ತು ಪಡೆದರೆ ಸ್ವಾಭಿಮಾನ ಮಾರಿಕೊಂಡಂತೆ: ನಟ ಜಗ್ಗೇಶ್​

ಬೆಂಗಳೂರು: ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಕೆಯಲ್ಲಿ ತೊಡಗಿದ್ದಾರೆ. ಇನ್ನೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದ್ದು, ಇವರಿಗೆ ಹಿರಿಯ ಬಿಜೆಪಿ ನಾಯಕರು ಸಾಥ್​ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್​ ರಾಜ್ಯ ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನಗೆಳನ್ನು ತಮ್ಮದೇ ಶೈಲಿಯಲ್ಲಿ ಟೀಕಿಸಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆಗೂ ಮುನ್ನ ಸಾರ್ವಜನಿಕರನ್ನು ಉದ್ಧೇಶಿಸಿ ಮಾತನಾಡಿದ ನಟ ಜಗ್ಗೇಶ್​, ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಕಾಂಗ್ರೆಸ್​ನವರು ಹೇಳಿದ್ದರು. ಅದರಂತೆ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆದಿದ್ದಾರೆ ಎಂದು ಮಾತನಾಡಲು ಶುರು ಮಾಡಿದ ನಟ ಜಗ್ಗೇಶ್​ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದಾರೆ.

ಕುರಿ ಬಲಿ ಕೊಡುವ ಮೊದಲು ಮೆರವಣಿಗೆ ಮಾಡುತ್ತಾರೆ. ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡಲಾಗುತ್ತದೆ. ಈ ಹಾರಗಳೇ ಗ್ಯಾರಂಟಿಗಳು. ಮತದಾರರನ್ನು ಬಲಿ ಹಾಕಲು ಗ್ಯಾರಂಟಿ ನೀಡಲಾಗಿದೆ. ಎಷ್ಟೇ ಫ್ರೀ ಸ್ಕೀಂ ಕೊಟ್ಟರೂ ಮೋದಿ ಗ್ಯಾರಂಟಿ ಶಾಶ್ವತ. ಫ್ರೀ ಬೀಸ್ ಇಸ್ಕೊಂಡ್ರೆ ಸ್ವಾಭಿಮಾನ ಮಾರಿಕೊಂಡಂತೆ ಎಂದು ನಟ ಜಗ್ಗೇಶ್​ ಹೇಳಿದ್ದಾರೆ.

ಸೋಲಿನ ಬೆನ್ನಲ್ಲೇ ರಿಷಭ್​ ಪಂತ್​ಗೆ 24 ಲಕ್ಷ ರೂ. ದಂಡ, ​ನಿಷೇಧದ ಭೀತಿ

Dailyhunt
Disclaimer: This content has not been generated, created or edited by Dailyhunt. Publisher: Vijayvani