ಬೆಂಗಳೂರು: ಕೈ ತೊಳೆಯಲು ಹೋಗಿ ಯುವಕನೋರ್ವ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ನರಸಿಂಹನಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಉಜಿನಿ ಹೊಸಹಳ್ಳಿ ಗ್ರಾಮದ ಸುನಿಲ್ (30) ಎಮದು ಗುರುತಿಸಲಾಗಿದ್ದು, ವಿಜಿಕುಮಾರ್ ಫಾರಂನಲ್ಲಿ ಈ ಘಟನೆ ನಡೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ದೊಡ್ಡಬಳ್ಳಾಪುರ ವಿಭಾಗದ ಹಿರಿಯ ಅಧಿಕಾರಿಯೊಬ್ಬರು, ಮೃತ ಯುವಕ ಸುನಿಲ್ ವಿಜಿಫಾರಂನಲ್ಲಿ ಕೆಲಸ ಮಾಡುತ್ತಿದ್ದ. ಹೋಳಿ ಹಬ್ಬ ಇದ್ದ ಕಾರಣ ಸ್ನೇಹಿತರ ಜೊತೆ ಆಟವಾಡಿ ಸಂಜೆ ಆರು ಘಂಟೆ ಸುಮಾರಿಗೆ ಕೃಷಿಹೊಂಡದ ಬಳಿ ಕೈ ತೊಳೆಯಲು ಹೋಗಿದ್ದಾನೆ. ಈ ವೇಳೆ ಆತ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮುಳುಗಿ ಮೃತಪಟ್ಟಿರುವುದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೊತ್ತು ಊಟಕ್ಕಾಗಿ ಪರದಾಡಿದ ನಟ ಇಂದು ಒಟಿಟಿಯ ಸೂಪರ್ಸ್ಟಾರ್
ಪಂದ್ಯದ ವೇಳೆ ಕ್ರೀಡಾಂಗಣದಲ್ಲೇ 'ಧಮ್' ಹೊಡೆದ ಶಾರುಖ್ ಖಾನ್; ವಿಡಿಯೋ ವೈರಲ್
ಇಳಿ ವಯಸ್ಸಿನಲ್ಲಿ ಸಿಧು ಮೂಸೆವಾಲ ಪೋಷಕರಿಗೆ ಗಂಡು ಮಗು ಜನನ; ಆರೋಗ್ಯ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ಜಾರಿ
ಹೊತ್ತು ಊಟಕ್ಕಾಗಿ ಪರದಾಡಿದ ನಟ ಇಂದು ಒಟಿಟಿಯ ಸೂಪರ್ಸ್ಟಾರ್ಪಂದ್ಯದ ವೇಳೆ ಕ್ರೀಡಾಂಗಣದಲ್ಲೇ 'ಧಮ್' ಹೊಡೆದ ಶಾರುಖ್ ಖಾನ್; ವಿಡಿಯೋ ವೈರಲ್
