ಲಖನೌ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರ್ ಜಿಲ್ಲೆಯಲ್ಲಿರುವ ದೆಹಲಿ-ಲಖನೌ ಎಕ್ಸ್ಪ್ರೆಸ್ ಹೈವೇಯಲ್ಲಿ ನಡೆದಿದೆ.
ಅಪಘಾತದಲ್ಲಿ ಎರಡು ಕಾರುಗಳು ಜಖಂಗೊಂಡಿದ್ದು, ಪೊಲೀಸರು ಮೃತದೇಹಗಳನ್ನು ಹೊರತೆಗೆಯುವುದಕ್ಕೆ ಹರಸಾಹಸಪಟ್ಟಿದ್ದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ತೊರೆದು ಕಲ್ಕತ್ತಾ ಸೇರ್ತಾರ ಹಿಟ್ಮ್ಯಾನ್?; ಪುಷ್ಠಿ ನೀಡುತ್ತಿವೆ ಫೋಟೋಗಳು
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಹಾಪುರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 09 ರ ಅಲ್ಲಾಭಕ್ಷಪುರ ಟೋಲ್ ಪ್ಲಾಜಾ ಬಳಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಎದುರು ಬರುತ್ತಿದ್ದ ಲಾರಿಗೆ ಗುದ್ದಿದೆ. ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಪೈಕಿ ಆರು ಮಂದಿ ಮೃತಪಟ್ಟಿದ್ದಾರೆ. ಓರ್ವ ಸ್ಥಿತಿ ಚಿಂತಾಜನಕವಾಗಿದೆ.
ಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರನ್ನು ಕಟ್ ಮಾಡಿ ಮೃತದೇಹ ಹಾಗೂ ಗಾಯಾಳುಗಳನ್ನು ಹೊರತೆಗೆಯಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.
ನನ್ನ ಒಪ್ಪಿಗೆ ಇಲ್ಲದೇ ಜನ್ಮ ನೀಡಿದ್ದಾರೆ ಎಂದು ಆರೋಪಿಸಿ ಪೋಷಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಮಹಿಳೆ
ಟಾಯ್ಲೆಟ್ಗೆ ಹೋದರೂ ಫ್ಲಶ್ ಮಾಡೋಕೆ ನೀರಿಲ್ಲ ಗುರು…; ಈಕೆ ಕಷ್ಟ ಕೇಳೋರು ಯಾರು ಇಲ್ವಂತೆ

