ಸಾಗರ: ವಿಧಾನಸಭಾ ಚುನಾವಣೆಗೆ ಮುನ್ನ ಮಲೆನಾಡು ರೈತರ ಸಮಸ್ಯೆ ಬಗೆಹರಿಸಬೇಕು. ಈ ಹಿಂದೆ ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ರೈತರ ಸಮಸ್ಯೆ ಬಗೆಹರಿಸುವುದಾಗಿ ನೀಡಿದ್ದ ಆಶ್ವಾಸನೆ ಈಡೇರಿಸಬೇಕು ಎಂದು ಒತ್ತಾಯಿಸಿ ಮಲೆನಾಡು ರೈತ ಹೋರಾಟ ವೇದಿಕೆ ಅಧ್ಯಕ್ಷ ತೀ.ನ.ಶ್ರೀನಿವಾಸ್ ಬೆಂಗಳೂರಿನಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.2023ರ ವಿಧಾನಸಭಾ ಚುನಾವಣೆ ಪೂರ್ವ ಹಾಲಿ ಸಚಿವ ಮಧು ಬಂಗಾರಪ್ಪ ಆಯನೂರಿನಿಂದ ಶಿವಮೊಗ್ಗವರೆಗೆ ಪಾದಯಾತ್ರೆ ನಡೆಸಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವುದು, ಅರಣ್ಯಭೂಮಿ ಸಾಗುವಳಿದಾರರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದ್ದರು.

