Dailyhunt
ನಾಳೆ, ನಾಡಿದ್ದು ಕರಾವಳಿಯಲ್ಲಿ ರೆಡ್​ ಅಲರ್ಟ್​! ಮೀನುಗಾರರಿಗೆ  ಎಚ್ಚರಿಕೆ

ನಾಳೆ, ನಾಡಿದ್ದು ಕರಾವಳಿಯಲ್ಲಿ ರೆಡ್​ ಅಲರ್ಟ್​! ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ಮುಂಗಾರು ಚುರುಕಾದ ಪರಿಣಾಮ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ ಮುಂದಿನ ಐದು ದಿನ ಮುಂದುವರಿಯಲಿದೆ. ಸೋಮವಾರ ಕರಾವಳಿ ಭಾಗದ ಪ್ರದೇಶಗಳಲ್ಲಿ ಸರಾಸರಿ 8 ರಿಂದ 10 ಸೆಂಟಿಮೀಟರ್ ಮಳೆಯಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂನ್ 15 ಮತ್ತು 16 ರಂದು ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್​ ಅರ್ಲಟ್​ ಘೋಷಿಸಿದೆ. ಈ ವೇಳೆ 20 ಸೆಂ.ಮೀ. ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮುಂದಿನ 72 ಗಂಟೆ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮುಂದಿನ 48 ಗಂಟೆ ವ್ಯಾಪಕ ಮಳೆಯಾಗಲಿದ್ದು, ಆರೆಂಜ್​ ಅರ್ಲಟ್​ ನೀಡಲಾಗಿದೆ.

ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಜೂನ್ 15, 16 ರಂದು ಯೆಲ್ಲೋ ಅರ್ಲಟ್​ ಇರಲಿದೆ. ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದಿರುವಂತೆ ಇಲಾಖೆ ತಿಳಿಸಿದೆ.

ಸೋಷಿಯಲಿಸಂ ಕೈಹಿಡಿದ ಮಮತಾ ಬ್ಯಾನರ್ಜಿ! ಬಂಗಾಳದಲ್ಲಲ್ಲ, ತಮಿಳುನಾಡಲ್ಲಿ!

ಮಾಫಿಯಾದಿಂದ ಜೀವಕ್ಕೆ ಅಪಾಯವಿದೆ ಎಂದ ಪತ್ರಕರ್ತ 'ಅಪಘಾತ'ದಲ್ಲಿ ಮೃತ!

Dailyhunt
Disclaimer: This content has not been generated, created or edited by Dailyhunt. Publisher: Vijayvani