ಔರಾದ್: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದ್ದು, ಏಕಬಳಕೆ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ತ್ಯಜಿಸಬೇಕು. ಸ್ವಚ್ಛ ಮತ್ತು ಪ್ಲಾಸ್ಟಿಕ್ಮುಕ್ತ ಗ್ರಾಮ ನಿಮಾರ್ಣಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಿರಣ ಪಾಟೀಲ್ ಹೇಳಿದರು.
Advertisement
ಹೊಕ್ರಾಣ ಗ್ರಾಮದಲ್ಲಿ ತಾಲೂಕು ಪಂಚಾಯಿತಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ಮುಕ್ತ ಗ್ರಾಮ ಅಭಿಯಾನ ಜಾಗೃತಿ ಜಾಥಾದಲ್ಲಿ ಮಾತನಾಡಿ, ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಮತ್ತು ಜೀವಸಂಕುಲಕ್ಕೆ ಉಂಟಾಗುವ ದುಷ್ಪರಿಣಾಮ ಕುರಿತು ಅರಿತುಕೊಳ್ಳಬೇಕು. ಜನರು ಪರಿಸರಸ್ನೇಹಿ ವಸ್ತುಗಳ ಬಳಕೆಗೆ ಆದ್ಯತೆ ನೀಡಬೇಕು ಎಂದರು. ಪಿಡಿಒಗಳಾದ ಕೃಷ್ಣಪ್ಪ, ರಮೇಶ್, ತಾಪಂ ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್ ಇತರರಿದ್ದರು.