ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಸಾಧು ಒಬ್ಬರ ಮೇಲೆ ಇಬ್ಬರು ಯುವಕರು ಅಮಾನುಷವಾಗಿ ಹಲ್ಲೆ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ಉತ್ತರಪ್ರದೇಶ ಅಲಿಗಢದಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ಸಾಧು ಗಜರಾಜ್ ಸಿಂಗ್ ನೀಡಿದ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಕೆಕೆಆರ್ ವಿರುದ್ಧ 7 ವಿಕೆಟ್ಗಳ ಸೋಲು; ಆರ್ಸಿಬಿ ನಾಯಕ ಫಾಫ್ ನೀಡಿದ ಕಾರಣ ಹೀಗಿದೆ
ಈ ಕುರಿತು ಪ್ರತಿಕ್ರಿಯಿಸಿರುವ ಅಲಿಗಢ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಘಟನೆ ನಡೆದ ವೇಳೆ ಮಜೋಲಾ ಗ್ರಾಮದ ಗಬೀಸ್ ಮತ್ತು ರಾಜೇಶ್ ಇಬ್ಬರು ಪಾನಮತ್ತರಾಗಿದ್ದರು. ಈ ವೇಳೆ ಪೆಟ್ರೋಲ್ ಬಂಕ್ನಲ್ಲಿದ್ದ ಸಾಧು ಗಜರಾಜ್ ಸಿಂಗ್ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಯಾವ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಈವರೆಗೆ ತಿಳಿದು ಬಂದಿಲ್ಲ. ಗಾಯಗೊಂಡಿರುವ ಸಾಧು ಗಜರಾಜ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇತ್ತ ಸಾಧು ಮೇಲಿನ ಹಲ್ಲೆಯನ್ನು ಖಂಡಿಸಿರುವ ನೆಟ್ಟಿಗರು ಯಾವ ಸುಮ್ಮನೆ ಇದ್ದವರ ಮೇಲೆ ಈ ರೀತಿ ಮಾರಣಾಂತಿಕ ಹಲ್ಲೆ ನಡೆಸಿರುವುದು ಸರಿಯಲ್ಲ. ಆರೋಪಿಗಳು ಯಾರೇ ಆಗಿದ್ದರೂ ಎಷ್ಟೇ ಪ್ರಭಾವಿಗಳಾಗಿದ್ದರು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿ ಮಾಡಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ಇನ್ನು ಮುಂದೆ ಹಾರ್ದಿಕ್ ಪಾಂಡ್ಯರನ್ನು ಟೀಕಿಸುವಂತಿಲ್ಲ; ಇಲ್ಲವಾದಲ್ಲಿ ಜಾರಿಯಾಗುತ್ತೆ ಕಠಿಣ ಕ್ರಮ
ಕಿರಾತಕ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ಇನ್ನಿಲ್ಲ
ಇನ್ನು ಮುಂದೆ ಹಾರ್ದಿಕ್ ಪಾಂಡ್ಯರನ್ನು ಟೀಕಿಸುವಂತಿಲ್ಲ; ಇಲ್ಲವಾದಲ್ಲಿ ಜಾರಿಯಾಗುತ್ತೆ ಕಠಿಣ ಕ್ರಮಕಿರಾತಕ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ಇನ್ನಿಲ್ಲ
