ರಾಯಚೂರು: ಯುಗಾದಿ ಹಬ್ಬದ ಪ್ರಯುಕ್ತ ಬಿರು ಬಿಸಿಲಿನಲ್ಲಿ ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಕ್ಕಕೊಟ್ನೆಕಲ್ ಬಳಿ ಘಟನೆ ನಡೆದಿದೆ.
ಮೃತ ಯುವಕನನ್ನು ಶ್ರೀಶೈಲ ದಡುತಿ (22) ಎಂದು ಗುರುತಿಸಲಾಗಿದ್ದು, ಈ ತ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಮೂಲದವನು ಎಂದು ತಿಳಿದು ಬಂದಿದೆ.
ಪಾದಯಾತ್ರೆ ಮಾನ್ವಿ ತಾಲೂಕಿನ ಚಿಕ್ಕಕೊಟ್ನೆಕಲ್ ಗ್ರಾಮಕ್ಕೆ ತಲುಪಿತ್ತು. ಸುಸ್ತಾಗಿರೋ ಹಿನ್ನೆಲೆ ದಾರಿ ಮಧ್ಯೆ ವಿಶ್ರಾಂತಿಗೆಂದು ಶ್ರೀಶೈಲ ಕುಳಿತಿದ್ದರು. ಬಿಸಿಲಿನ ತಾಪಕ್ಕೆ ದಣಿದಿದ್ದು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತವಾಗಿದ್ದು, ಆತ ಸ್ಥಳದಲ್ಲೇ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ದೆಹಲಿಯಲ್ಲಿ ಇಂಡಿಯಾ ಒಕ್ಕೂಟದಿಂದ ಪ್ರೊಟೆಸ್ಟ್; ಬಿಗಿ ಭದ್ರತೆ
ಚೆನ್ನೈ ವಿರುದ್ಧದ ಪಂದ್ಯ ಡೆಲ್ಲಿಯಿಂದ ಆಂಧ್ರಕ್ಕೆ ಶಿಫ್ಟ್; ಕಾರಣ ಹೀಗಿದೆ
ಅವಕಾಶ ಕೊಡದೇ ಇದ್ದರೂ ಬೇಸರ ಇಲ್ಲ… ಆದರೆ ಹೆಸರು ಬದಲಿಸುವುದಿಲ್ಲ: ನಟ ದರ್ಶನ್
ಚೆನ್ನೈ ವಿರುದ್ಧದ ಪಂದ್ಯ ಡೆಲ್ಲಿಯಿಂದ ಆಂಧ್ರಕ್ಕೆ ಶಿಫ್ಟ್; ಕಾರಣ ಹೀಗಿದೆ
