ಕೊಡಗು: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯ ಕುಂಬಾರಗಡಿಗೆಯಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಪ್ರಕಾಶನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ (ಮೇ 09) ಪ್ರಕಟವಾದ ದಿನದಂದು ಆರೋಪಿ ವಿದ್ಯಾರ್ಥನಿಯ ಕೊಲೆ ಮಾಡಿ ರುಂಡದ ಸಮೇತ ಪರಾರಿಯಾಗಿದ್ದ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಆರೋಪಿ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಗುಜರಾತ್ ಬ್ಯಾಟ್ಸ್ಮನ್ಗಳ ಆರ್ಭಟಕ್ಕೆ ಕಣ್ಣೀರಿಟ್ಟ ಸಿಎಸ್ಕೆ ಫ್ಯಾನ್; ವಿಡಿಯೋ ವೈರಲ್
ಬಾಲಿವುಡ್ನ ಸ್ಟಾರ್ ನಟರ ಚಿತ್ರ ಹಣ ಗಳಿಸದಿರಲು ಕಾರಣವೇನು?; ಖ್ಯಾತ ನಟ ನೀಡಿದ ವಿವರಣೆ ಹೀಗಿದೆ
ಗುಜರಾತ್ ಬ್ಯಾಟ್ಸ್ಮನ್ಗಳ ಆರ್ಭಟಕ್ಕೆ ಕಣ್ಣೀರಿಟ್ಟ ಸಿಎಸ್ಕೆ ಫ್ಯಾನ್; ವಿಡಿಯೋ ವೈರಲ್
