Dailyhunt Logo
  • Light mode
    Follow system
    Dark mode
    • Play Story
    • App Story
ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ - vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ - vishwanews24

Vishwa News24 2 weeks ago

ಬೆಂಗಳೂರು:ಕಿಂಚಿತ್ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ಬುಧವಾರ 32 ಪಾನ್ ಮಸಾಲಾ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ವಿವಿಧೆಡೆ ಕಾರ್ಯಾಚರಣೆ ನಡೆಸಿ 32 ಪಾನ್ ಮಸಾಲಾ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ - vishwanews24

ಪ್ರಮುಖವಾಗಿ, ಬೆಂಗಳೂರು, ಮೈಸೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಪಾನ್ ಮಸಾಲಾ ಮಾರಾಟ ಮಳಿಗೆಗಳಿಂದ ಮಾದರಿ ಸಂಗ್ರಹಿಸಲು ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಈ ಪೈಕಿ ಬುಧವಾರ ಕೆಲವು ಮಳಿಗೆಗಳಿಂದ 32 ಸ್ಯಾಂಪಲ್ಸ್ ಸಂಗ್ರಹಿಸಿದ್ದು, ಗುರುವಾರವೂ ರಾಜ್ಯದ ವಿವಿಧೆಡೆ ಕಾರ್ಯಾಚರಣೆ ಮುಂದುವರೆಯುವ ಸಾಧ್ಯತೆಗಳಿವೆ.

ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ಇತ್ತೀಚೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು, 'ಪಾನ್ ಮಸಾಲಾ, ಗುಟ್ಕಾ ಮತ್ತಿತರ ಪದಾರ್ಥಗಳಲ್ಲಿ ಅಮಲು ಬರುವ ವಸ್ತುಗಳನ್ನು ಬೆರಕೆ ಮಾಡಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಶೀಘ್ರ ಇದನ್ನು ಪರಿಶೀಲಿಸುತ್ತೇವೆ. ಈ ಸಂಗತಿ ನಿಜವಾದರೆ, ಕೂಡಲೇ ನಿಲ್ಲದಿದ್ದರೆ, ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಪದಾರ್ಥಗಳ ಮಾರಾಟವನ್ನು ಕರ್ನಾಟಕದಲ್ಲಿ ನಿಷೇಧ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಇದೀಗ ಅದರ ಬೆನ್ನಲ್ಲೇ ಇಲಾಖೆಯು ಚುರುಕು ಕಾರ್ಯಾಚರಣೆ ಕೈಗೊಂಡಿದೆ.

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ - vishwanews24

ಜ್ಞಾಪನ ಪತ್ರ ಹೊರಡಿಸಿದ್ದ ಆಯುಕ್ತರು: ರಾಜ್ಯಾದ್ಯಂತ ಮಾರಾಟ ಮಾಡಲಾಗುವ ಪಾನ್ ಮಸಾಲ ಹಾಗೂ ಪಾನ್‌ನಿಂದ ತಯಾರಿಸುವ ಇತರೆ ಉತ್ಪನ್ನಗಳ ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಜೂ.30 ಮತ್ತು ಜು.1ರಂದು ವಿಶೇಷ ಆಂದೋಲನ ಕೈಗೊಳ್ಳುವ ಮುಖಾಂತರ ಪಾನ್ ಮಸಾಲ ಹಾಗೂ ಪಾನ್‌ನಿಂದ ತಯಾರಿಸುವ ಇತರೆ ಉತ್ಪನ್ನಗಳ ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಬೇಕು. ಅವುಗಳ ವಿಶ್ಲೇಷಣೆಗಾಗಿ ತಮ್ಮ ವಿಭಾಗಕ್ಕೆ ಸಂಬಂಧಿಸಿದ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ (ರಾಜ್ಯ ಮತ್ತು ವಿಭಾಗೀಯ ಆಹಾರ ಪ್ರಯೋಗಾಲಯ) ವಿಶ್ಲೇಷಣೆಗಾಗಿ ಕಳುಹಿಸಬೇಕು.

ಅಲ್ಲದೆ, ಪಾನ್ ಮಸಾಲ ಹಾಗೂ ಪಾನ್‌ನಿಂದ ತಯಾರಿಸುವ ಇತರೆ ಉತ್ಪನ್ನಗಳ ಸಗಟು ಮಳಿಗೆಗಳಿಗೆ ಪರಿಶೀಲನಾ ಭೇಟಿ ನೀಡಿ ತಪಾಸಣೆ ಕೈಗೊಳ್ಳಬೇಕು. ಆಹಾರ ಮಾದರಿಯ ಸಂಗ್ರಹಣೆಯ ವಿವರಗಳನ್ನು ಪ್ರಯೋಗಾಲಯದ ಹೆಸರಿನೊಂದಿಗೆ ದಾಖಲಿಸಬೇಕು. ಈ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ಆಯಾ ಜಿಲ್ಲಾ ಅಂಕಿತಾಧಿಕಾರಿಗಳು ನಡೆಸಿ ಕೇಂದ್ರ ಕಚೇರಿಗೆ ವರದಿ ಸಲ್ಲಿಸುವಂತೆ ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ಜೂ.29ರಂದು ಜ್ಞಾಪನ ಪತ್ರ ಹೊರಡಿಸಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Vishwa News24