Dailyhunt Logo
  • Light mode
    Follow system
    Dark mode
    • Play Story
    • App Story
ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು - vishwanews24

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು - vishwanews24

Vishwa News24 7 hrs ago

ರಂತೋಡು:ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ. ಗಂಭೀರ ಗಾಯಗೊಂಡು ಮೃತಪಟ್ಟ ಬೈಕ್ ಸವಾರ ವಿದ್ಯಾರ್ಥಿಯನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ (17 ವರ್ಷ) ಎಂದು ಗುರುತಿಸಲಾಗಿದೆ.

ಸಂತೋಷ್ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ಓದುತ್ತಿದ್ದರು. ಇಲ್ಲಿನ ಕುಲ್ಚಾರ್ ಸಮೀಪ ಬೈಕ್ ಮತ್ತು ಕಾರು ನಡುವೆ ಬುಧವಾರ ದಂದು ರಾತ್ರಿ ಅಪಘಾತ ಸಂಭವಿಸಿದೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಂತೋಷ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಗಾಯಾಳುವನ್ನು‌ ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದರು.

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ - vishwanews24

Dailyhunt
Disclaimer: This content has not been generated, created or edited by Dailyhunt. Publisher: Vishwa News24