ಜೀ ಕನ್ನಡ ವಾಹಿನಿಯಲ್ಲಿ (Zee Kannada) ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ (Amruthadhaare) ವೀಕ್ಷಕರು ಊಹಿಸಿರದ ಟ್ವಿಸ್ಟ್ ಪ್ರಸಾರ ಕಂಡಿದೆ. ಜೈದೇವ್ನ ಕುತಂತ್ರದಿಂದ ಮಿಂಚು ಕಾಣೆಯಾಗಿದ್ದು, ಆಕೆಯ ನಿಜವಾದ ಪೋಷಕರು ಎಂದು ಹೇಳಿಕೊಂಡು ಅಪರಿಚಿತ ದಂಪತಿ ದಿವಾನ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
ಅಷ್ಟೇ ಅಲ್ಲ ಗೌತಮ್ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಗೌತ ಅವರನ್ನು ಪೊಲೀಸ್ ಕಸ್ಟಡಿಗೆ (Police Custody) ಪಡೆದುಕೊಂಡಿದ್ದಾರೆ. ಹಾಗಾದ್ರೆ ಮಿಂಚು ಕಥೆ ಏನು?
ಸ್ಕೂಲ್ನಿಂದ ಮಿಂಚು ಕಾಣೆ
ಜೈದೇವ್ ಬಳಿ ಮಿಂಚು ಇದ್ದಾಳೆ. ಮಿಂಚು ಸ್ಕೂಲ್ನಿಂದ ನೇರವಾಗಿ ಮನೆಯಿಂದ ಆಚೆ ಹೋಗಲು ನಿರ್ಧಾರ ಮಾಡಿದ್ದಾಳೆ. ಮಹಿಮಾ ಜೊತೆ ಇರಲು ಇಷ್ಟ ಪಡದ ಮಿಂಚು ಮನೆಯನ್ನೇ ಬಿಟ್ಟು ಹೋಗಿದ್ದಾಳೆ. ಈಗ ಸ್ಕೂಲ್ನಿಂದ ಮಿಂಚು ಕಾಣೆಯಾಗಿದ್ದಾಳೆ ಎಂದು ಕಾಲ್ ಬಂದಿದೆ.
Shubha Poonja: ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ವಿಚ್ಛೇದನಕ್ಕೆ ಮೊರೆ ಹೋದ್ರಾ ದಂಪತಿ?
ಅಷ್ಟೊತ್ತಿಗೆ ಗೌತಮ್ ಮನೆಗೆ ಅಪರಚಿತ ದಂಪತಿ ಬಂದಿದ್ದಾರೆ. ಮಿಂಚು ದತ್ತು ಕೊಡುತ್ತಿರುವ ಸಂದರ್ಭದಲ್ಲಿ ದಿವಾನ್ ಮನೆಗೆ ಇಬ್ಬರ ಆಗಮನವಾಗಿದೆ. ಈ ಇಬ್ಬರು ಮಿಂಚು ನಮ್ಮ ಮಗಳು ಎಂದು ಹೇಳಿದ್ದಾರೆ. ನಾವು ಮಗುವನ್ನು ಬಿಟ್ಟು ಹೋಗಿದ್ದೀವಿ.
ಯಾರೋ ಆಕೆಯನ್ನು ಸಾಕಿದ್ದರು. ನಂತರ ಅವರು ವಿದೇಶಕ್ಕೆ ತೆರಳುವಾಗ ಮಗಳನ್ನು ಬಿಟ್ಟು ಹೋಗಿದ್ದರು. ಆನಂತರ ಯಾರೋ ಡ್ರೈವರ್ ಮಗಳನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಜೈದೇವ್ ಹೇಳಿಕೊಟ್ಟಂತೆ ಹೇಳಿದ್ದಾರೆ. ಪೊಲೀಸರು ಈಗ ಗೌತಮ್ ಮನೆಗೆ ಬಂದಿದ್ದಾರೆ.
ನಾನು ಮಗು ಕೇಳಿಕೊಂಡು ಬರ್ತೇವೆ ಅಂತ ಮಗುವನ್ನು ಅಡಗಿಸಿ ಇಟ್ಟಿದ್ದಾರೆ ಎಂದು ಪೊಲೀಸರ ಬಳಿ ಹೇಳಿದ್ದಾರೆ. ಇಷ್ಟು ವರ್ಷ ಯಾರೂ ಮಗಳನ್ನು ಹುಡುಕಿಕೊಂಡು ಬಂದಿಲ್ಲ. ನಮ್ಮ ಜೊತೆ ಬೆಳೆದಳು ಅಂತ ಗೌತಮ್ ಹೇಳಿದ್ದಾನೆ. ಆದರೆ ಕಾನೂನು ಪ್ರಕಾರ ತಪ್ಪಾಗಿದ್ದರಿಂದ ಮಗು ಸಿಗೋ ತನಕ ಗೌತಮ್ ಪೊಲೀಸ್ ಕಸ್ಟಡಿಗೆ ಇರಬೇಕಾಗಿದೆ.

