Dailyhunt
Chinthamani News: ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ

Chinthamani News: ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ

Vishwavani 2 weeks ago

ಚಿಂತಾಮಣಿ : ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಚೈತ್ರ ಮಾಸದ ಹುಣ್ಣಿಮೆಯ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರೇಯಣ ಸ್ವಾಮಿ ಹಾಗೂ ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆಯನ್ನು ನೇರವೇರಿಸಿ, ಮಹಾ ಮಂಗಳಾರತಿ ಯನ್ನು ಬೆಳಗಲಾಯಿತು.

ರಥೋತ್ಸವವನ್ನು ನಡೆಸಲಾಯಿತು. ಭಕ್ತಾದಿಗಳು ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು.

ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು.

Chintamani News: ಅಧ್ಯಕ್ಷರಾಗಿ ವೆಂಕಟೇಶಪ್ಪ ಉಪಾಧ್ಯಕ್ಷರಾಗಿ ಹನುಮಪ್ಪ ಅವಿರೋಧವಾಗಿ ಆಯ್ಕೆ

ಶ್ರೀಯೋಗಿನಾರೇಯಣ ಸಂಕೀರ್ತನಾಯೋಜನೆಯ ನಾದಸುಧಾರಸ ಕಲಾವಿದರಿಂದ ಸಂಕೀರ್ತನೆಯನ್ನು ಸಮರ್ಪಿಸಲಾಯಿತು. ಹುಣ್ಣಿಮೆ ಪ್ರಯುಕ್ತ ಅಖಂಡ ಸಂಕೀರ್ತನೆ ಯನ್ನು ಏರ್ಪಡಿಸಲಾಗಿತ್ತು. ಗರ್ಭಗುಡಿಯಲ್ಲಿ ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯ ನವರ ಮೂಲ ವಿಗ್ರಹಕ್ಕೆ ವಿವಿಧ ಬಗೆಯ ಹೂಗಾಳಿಂದ ಅಲಂಕಾರವನ್ನು ಮಾಡಲಾಗಿತ್ತು.

ಆಲಂಬಗಿರಿಯಲ್ಲಿ ಗಿರಿಪ್ರದಕ್ಷಿಣೆ: ಆಲಂಬಗಿರಿ ದೇವಾಲಯದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಆಲಂಬಗಿರಿ ಬೆಟ್ಟದ ಪ್ರಕೃತಿಯ ತಪ್ಪಲಿನಲ್ಲಿ ಹುಣ್ಣಿಮೆ ಪ್ರಯುಕ್ತ ಸಂಕೀರ್ತನಾ ಗಿರಿಪ್ರದಕ್ಷಿಣೆ ಕಾರ್ಯಕ್ರಮ ನಡೆಯಿತು.

ಹುಣ್ಣಿಮೆ ಗಿರಿಪ್ರದಕ್ಷಿಣೆಯಲ್ಲಿ ಕೈವಾರ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ.ಎಂ.ಆರ್. ಜಯರಾಮ್ ಭಾಗವಹಿಸಿದ್ದರು. ಅವರೊಂದಿಗೆ ಹಲವಾರು ಭಕ್ತರು ಗಿರಿ ಪ್ರದಕ್ಷಿಣೆ ಮಾಡಿದರು.

Dailyhunt
Disclaimer: This content has not been generated, created or edited by Dailyhunt. Publisher: Vishwavani