Dailyhunt Logo
  • Light mode
    Follow system
    Dark mode
    • Play Story
    • App Story
Madapattana Quarry Tragedy: ಮಾದಪಟ್ಟಣ ಕಲ್ಲು ಕ್ವಾರಿ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆ; ಸ್ಫೋಟದಿಂದ ಅವಘಡ ಸಂಭವಿಸಿಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್‌

Madapattana Quarry Tragedy: ಮಾದಪಟ್ಟಣ ಕಲ್ಲು ಕ್ವಾರಿ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆ; ಸ್ಫೋಟದಿಂದ ಅವಘಡ ಸಂಭವಿಸಿಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್‌

Vishwavani 2 weeks ago

ಬೆಂಗಳೂರು, ಜು. 2: ರಾಜಧಾನಿಯ ಹೊರವಲಯದ ತಾವರೆಕೆರೆ ಸಮೀಪದ ಮಾಗಡಿ ರಸ್ತೆಯ ಮಾದಪಟ್ಟಣ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿಸು ಸಂಭವಿಸಿದ ಭೀಕರ ದುರಂತದಲ್ಲಿ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಗುರುವಾರ (ಜುಲೈ 2) ಬೆಳಗ್ಗೆ ಏಕಾಏಕಿ ಬಂಡೆ ಕುಸಿದ ಪರಿಣಾಮ ಈ ದುರಂತ ಸಂಭವಿಸಿದೆ.

ಸ್ಫೋಟದಿಂದ ಈ ಅವಘಡ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದೀಗ ಮೃತರ ಗುರುತು ಪತ್ತೆಯಾಗಿದೆ. ಒಟ್ಟು 20 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಪೈಕಿ ಆರು ಜನ ಮಧ್ಯ ಪ್ರದೇಶ ಮೂಲದವರಾಗಿದ್ದರೆ, ಮತ್ತೋರ್ವ ಕಾರ್ಮಿಕ ಯಾದಗಿರಿ ಜಿಲ್ಲೆಯವರು.

ಮೃತರನ್ನು ರಾಮು (46), ರಾಜಪಾಲ್​​ ಸಿಂಗ್​ (35), ಸತ್ಯನಾರಾಯಣ ಸಿಂಗ್​ (31), ರಾಮ ವತಾರ್​ ಸಿಂಗ್ (31), ರಾಜೇಂದ್ರ ಪ್ರಸಾದ್, ನೂಹರ್​ ಸಿಂಗ್​​ ಮತ್ತು ಭುವನೇಶ್ವರ ಸಿಂಗ್​ ಎಂದು ಗುರುತಿಸಲಾಗಿದೆ. ಇನ್ನು ಉತ್ತರ ಭಾರತದ ನಾಲ್ವರು, ಕರ್ನಾಟಕದ ಓರ್ವ ಕಾರ್ಮಿಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಮೈಸೂರು ರಸ್ತೆಯಲ್ಲಿರುವ ಆರ್.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಡಿಕೆಶಿ ಪ್ರತಿಕ್ರಿಯೆ:

Dailyhunt
Disclaimer: This content has not been generated, created or edited by Dailyhunt. Publisher: Vishwavani