ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಕೇರಳದ ಉಪ್ಪಳದ ಮೊಹಮ್ಮದ್ ಅನ್ಸಾರ್ ಕಯ್ಯಾರ್ ಮತ್ತು ಕೊಝಿಕೋಡ್ನ ಮೊಹಮ್ಮದ್ ಮೂಸ ಮಿಯಾಸ್, ಬಂಧಿತರು. ಇವರು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ತಪಾಸಣೆ ನಡೆಸಿದಾಗ ಸೂಟ್ಕೇಸ್ನ ಕೆಳಭಾಗದಲ್ಲಿ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಗಳಿಂದ
703 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಇದರ ಮೌಲ್ಯ 34,46,464 ರೂಪಾಯಿ ಎಂದು ಅಂದಾಜಿಸಲಾಗಿದೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಸೂಕ್ತ ಸಂಗಾತಿ ಬೇಕಾ ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ !
ಸಂಬಂಧಿಸಿದ ಸುದ್ದಿ
- ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿ ಉರುಳಿಬಿದ್ದ ತೆಂಗಿನ ಮರ
- ಅಂತಾರಾಷ್ಟ್ರೀಯ ಯುವ ಕೌಶಲ್ಯ ದಿನ: ಜುಲೈ- ಆಗಸ್ಟ್ ತಿಂಗಳು ಕೌಶಲ್ಯ ಮಾಸ: ಡಿಸಿಎಂ ಘೋಷಣೆ
- ತುರ್ತು ಪರಿಸ್ಥಿತಿ ವೇಳೆ ಬಲವಂತದ ಶಸ್ತ್ರಚಿಕಿತ್ಸೆ ಮೂಲಕ ಜನಸಂಖ್ಯಾ ನಿಯಂತ್ರಣ: ಸಿ.ಟಿ.ರವಿ
- ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ
- ನಾನು ಯಾರಿಗೂ ಮೋಸ ಮಾಡಿಲ್ಲ: ಅರುಣಾ ಕುಮಾರಿ

