ರಾಷ್ಟ್ರ ರಾಜಧಾನಿಯ ದೆಹಲಿ ರೈಲು ನಿಲ್ದಾಣದಲ್ಲಿ ಅತ್ಯಂತ ಆಘಾತಕಾರಿ ಮತ್ತು ಕ್ರೂರ ಘಟನೆಯೊಂದು ನಡೆದಿದೆ. ರೈಲು ನಿಲ್ದಾಣದ ಆವರಣದಲ್ಲೇ ಐದು ಜನ ತೃತೀಯಲಿಂಗಿಗಳು ಸೇರಿಕೊಂಡು ವ್ಯಕ್ತಿಯೊಬ್ಬನ ಮೇಲೆ ಅತ್ಯಂತ ಬರ್ಬರವಾಗಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪತಿಯನ್ನು ರಕ್ಷಿಸಲು ಧಾವಿಸಿದ ಆತನ ಪತ್ನಿ ಮತ್ತು ಅಪ್ರಾಪ್ತ ಮಗಳ ಮೇಲೂ ಅಮಾನವೀಯವಾಗಿ ದೈಹಿಕ ದೌರ್ಜನ್ಯ ಎಸಗಲಾಗಿದೆ.
ಹಣ ಕೊಡದಿದ್ದಕ್ಕೆ ಆಕ್ರೋಶಗೊಂಡ ತೃತೀಯಲಿಂಗಿಗಳ ಗುಂಪು ಏಕಾಏಕಿ ಆ ವ್ಯಕ್ತಿಯ ಮೇಲೆ ಮುಗಿಬಿದ್ದಿದೆ. ಆತನನ್ನು ಕೆಳಗೆ ತಳ್ಳಿ ತೀವ್ರವಾಗಿ ಥಳಿಸಲು ಆರಂಭಿಸಿದ್ದಾರೆ. ರಕ್ತಸಿಕ್ತವಾಗಿ ಬಿದ್ದಿದ್ದ ಪತಿಯನ್ನು ಹೇಗಾದರೂ ಮಾಡಿ ಬದುಕಿಸಿಕೊಳ್ಳಬೇಕೆಂದು ಆತನ ಪತ್ನಿ ಮತ್ತು ಮಗಳು ಅಡ್ಡ ಬಂದಾಗ, ಆ ಕ್ರೂರ ಗುಂಪು ಅವರನ್ನೂ ಬಿಡದೆ ತಳ್ಳಿ, ಅಸಭ್ಯವಾಗಿ ವರ್ತಿಸಿ ದೈಹಿಕವಾಗಿ ಹಲ್ಲೆ ನಡೆಸಿದೆ. ರೈಲು ನಿಲ್ದಾಣದಲ್ಲಿದ್ದ ನೂರಾರು ಪ್ರಯಾಣಿಕರು ಇದನ್ನು ನೋಡುತ್ತಿದ್ದರೂ, ಯಾರೂ ಕೂಡ ಕುಟುಂಬದ ನೆರವಿಗೆ ಬರದಿರುವುದು ದುರದೃಷ್ಟಕರ.
ಘಟನೆಯ ನಂತರ ರೈಲ್ವೆ ರಕ್ಷಣಾ ಪಡೆ ಮತ್ತು ಸ್ಥಳೀಯ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಐಎಫ್ಟಿ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು, ಹಲ್ಲೆ ನಡೆಸಿದ ಐದೂ ಜನ ತೃತೀಯಲಿಂಗಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಂಡಿದ್ದಾರೆ.
pic.twitter.com/iw1gzu7s26 - Ghar Ke Kalesh (@gharkekalesh)

