ಅಭಿಮಾನೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಇಂದು ಮಾತನಾಡಿದರು. ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಹೋರಾಟಕ್ಕೆ ಮತ್ತೊಂದು ಹೆಸರು ಎಂದು ಅವರು ವಿಶ್ಲೇಷಿಸಿದರು. ಪರಿಶ್ರಮ, ಛಲಕ್ಕೆ ಅವರು ಹೆಸರು ಪಡೆದವರು. ಬಡವರು, ಶೋಷಿತ- ಪೀಡಿತರು, ರೈತರ ಪರವಾಗಿ ಅವರ ಧ್ವನಿಯಾಗಿ 5 ದಶಕಗಳಿಂದ ನಿರಂತರವಾಗಿ ಕೆಲಸ ಮಾಡಿದ್ದಾರೆ ಎಂದು ನುಡಿದರು.
ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ಈ ಕಾರ್ಯಕ್ರಮಕ್ಕೆ 10 ಲಕ್ಷಕ್ಕೂ ಹೆಚ್ಚು ಜನರನ್ನು ನಿರೀಕ್ಷಿಸಿರುವುದಾಗಿ ತಿಳಿಸಿದರು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ಮಾತನಾಡಿ, ಪಕ್ಷದ ಒಳಿತಿಗಾಗಿ ಈ ಕಾರ್ಯಕ್ರಮ ನಡೆಸಲು ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎಂದು ವಿವರಿಸಿದರು. 50 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಸಾಧನೆ ಮಾತನಾಡುವಂತೆ ಬದುಕಿದ್ದಾರೆ ಎಂದು ತಿಳಿಸಿದರು. ಅಧಿಕಾರ ಬರುವುದಕ್ಕೆ ಮೊದಲು ನಾನು ಅಹಿಂದ ನಾಯಕ ಎಂದು ಹೇಳಿಕೊಂಡವರನ್ನು ನೋಡಿದ್ದೇವೆ. ಮಣ್ಣಿನ ಮಕ್ಕಳು, ಹಿಂದುಳಿದ ವರ್ಗದ ನಾಯಕ ಎಂದವರನ್ನು ನೋಡಿದ್ದೇವೆ. ಯಡಿಯೂರಪ್ಪ ಅವರು ಮಾತನಾಡುವುದೇ ಸಾಧನೆ ಆಗಬಾರದು; ಸಾಧನೆ ಮಾತನಾಡಬೇಕೆನ್ನುತ್ತಾರೆ. ಆ ರೀತಿಯಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ಅವರು ಕೆಲಸ ಮಾಡಿದ್ದಾರೆ ಎಂದರು.
ಮಾಜಿ ಸಚಿವ ಗೋಪಾಲಯ್ಯ, ಶಾಸಕ ಸುರೇಶ್ ಗೌಡ, ಜಿಲ್ಲಾ ಅಧ್ಯಕ್ಷ ಹೆಬ್ಬಾಕ ರವಿ, ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ, ಪಕ್ಷದ ಪ್ರಮುಖರು ಇದ್ದರು. ತುಮಕೂರು ಮತ್ತು ಮಧುಗಿರಿ ಸಂಘಟನಾತ್ಮಕ ಜಿಲ್ಲೆಗಳ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದು, ಯಶಸ್ವಿ ಅಭಿಮಾನೋತ್ಸವವನ್ನು ಮಾಡುವುದಾಗಿ ತಿಳಿಸಿದರು.

