ಬೊಲೆರೋ ಕ್ಯಾಂಪರ್ನಲ್ಲಿ ರಾಜಸ್ಥಾನದ ಲೋಹಾವತ್ನಿಂದ ಸುಮಾರು 18 ಮಂದಿ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದ ವೇಳೆ ಬಸ್ ಅಪ್ಪಳಿಸಿದೆ.
ಬೊಲೆರೋ ಕ್ಯಾಂಪರ್ನಲ್ಲಿ ಲೋಹಾವತ್ನಿಂದ ಸುಮಾರು 18 ಮಂದಿ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ಬಂದ ಬಸ್ ಕ್ಯಾಂಪರ್ಗೆ ಡಿಕ್ಕಿ ಹೊಡೆದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಜೊತೆಗೆ ಸ್ಥಳಕ್ಕೆ ಭೇಟಿ ನೀಡಿದ ಬಾರ್ಮೆರ್ ಜಿಲ್ಲಾಧಿಕಾರಿ ಲೋಕ ಬಂಧು, ಪೊಲೀಸ್ ವರಿಷ್ಠಾಧಿಕಾರಿ ಆನಂದ ಶರ್ಮಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನರಪತ್ ಸಿಂಗ್, ಹೆಚ್ಚುವರಿ ಜಿಲ್ಲಾಧಿಕಾರಿ ಓಂಪ್ರಕಾಶ್ ವಿಷ್ಣೋಯ್ ಪರಿಶೀಲನೆ ನಡೆಸಿದ್ದಾರೆ.

